ಜನ ಮನದ ನಾಡಿ ಮಿಡಿತ

Advertisement

ಲಕ್ನೋ : ಐಪಿಎಲ್‌ ನಲ್ಲಿ ರಿಷಬ್ ಪಂತ್ ಗೆ 30 ಲಕ್ಷ ದಂಡ

ಮಂಗಳವಾರ ನಡೆದಿದ್ದ ಐಪಿಎಲ್‌ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಅವರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಲಕ್ನೋ ತಂಡದ ಈ ಋತುವಿನ ಮೂರನೇ ಓವರ್ ರೇಟ್ ಅಪರಾಧವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ನಾಯಕ ಪಂತ್‌ಗೆ 30 ಲಕ್ಷ, ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 50ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್‌ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದಿನ ಆವೃತ್ತಿಯಲ್ಲಿ 3 ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡರೆ ನಾಯಕನಿಗೆ 30 ಲಕ್ಷ ರೂ. ದಂಡದ ಜತೆಗೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಮುಂಬೈ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಈ ಶಿಕ್ಷೆಗೆ ಗುರಿಯಾಗಿದ್ದರು. ಹಾಲಿ ಆವೃತ್ತಿಯ ಐಪಿಎಲ್‌ನಿಂದ ಈ ನಿಯಮ ಕೈಬಿಟ್ಟ ಕಾರಣ ಪಂತ್‌ ನಿಷೇಧ ಶಿಕ್ಷೆಯಿಂದ ಪಾರಾದರು.

ಹೊಸ ನಿಯಮದ ಪ್ರಕಾರ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್‌ ಮಾಡಿದರೆ ನಾಯಕರಿಗೆ ದಂಡ ವಿಧಿಸಿ, ಡಿಮೆರಿಟ್‌ ಅಂಕ ನೀಡಲಾಗುತ್ತದೆ. ಡಿಮೆರಿಟ್‌ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್‌ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.

 

ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ಘೋರ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದ ರಿಷಭ್‌ ಪಂತ್‌ ಭಾರೀ ಟೀಕೆಗೆ ಗುರಿಯಾಗಿದ್ದರು. 27 ಕೋಟಿ ಮೊತ್ತ ಪಡೆದರೂ 27 ರನ್‌ ಗಳಿಸಲು ಸಾಧ್ಯವಾಗಲಿಲ್ಲ ಎಂದು ನೆಟ್ಟಿಗರು ಅವರನ್ನು ಟ್ರೋಲ್‌ ಮಾಡಿದ್ದರು. ಆದರೆ ಪಂತ್‌ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಎಲ್ಲ ಟೀಕೆಗೆ ಉತ್ತರ ನೀಡಿದರು. 61 ಎಸೆತಗಳಿಂದ ಅಜೇಯ 118 ರನ್‌ ಹೊಡೆದರು. 11 ಬೌಂಡರಿ, 8 ಸಿಕ್ಸರ್‌ ಸಿಡಿಸಿ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು. ಆದರೆ ಪಂದ್ಯ ಸೋತ ಕಾರಣ ಇವರ ಶತಕ ವ್ಯರ್ಥವಾಯಿತು.

 

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!