ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದ್ರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ ನೀಡಬಾರದು. ಕೋಮು ಪ್ರಚೋದನೆ ನೀಡುವ ಮಾಹಿತಿಗಳಿದ್ದರೆ ತಕ್ಷಣವೇ ಪೊಲೀಸರಿಗೆ ತಿಳಿಸಬೇಕು. ಸಾರ್ವಜನಿಕರು ಯಾವುದೇ ಪ್ರಚೋದನೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಹಿಂದಿನ ಎಸ್ಪಿ ಅರುಣ್ ಕುಮಾರ್ ಅವರು, ಅಕ್ರಮ ಚಟುವಟಿಕೆ ವಿರುದ್ಧ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೆಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದರೋ ಅವುಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!