ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಟ ಕಮಲ್ ಹಾಸನ್‌ಗೆ ಮತ್ತೊಂದು ಸಂಕಷ್ಟ..!!

ತಮಿಳಿನಿ0ದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ. ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿದರು. ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರು ನಟಿಸಿರುವ “ಥಗ್ ಲೈಫ್” ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದು, ಇದು ಅತ್ಯಂತ ಖಂಡನೀಯ. ಈ ಆಧಾರರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೆ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಜೂನ್ 5ರಂದು ಬಿಡುಗಡೆ ಸಿದ್ದವಾಗಿರುವ ಅವರ “ತಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!