ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕೋಮು ದ್ವೇಷ ಭಾಷಣ ಮಾಡಿದವರನ್ನ ಬಂಧಿಸಿ; SKSSF ಆಗ್ರಹ

ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿನ ಅಬ್ದುಲ್ ರಹೀಂ ಎಂಬ ಆಮಾಯಕ ಕೂಲಿ ಕಾರ್ಮಿಕನನ್ನು ದುಷ್ಟ ಶಕ್ತಿಗಳು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದು, ಅಮಾಯಕ ಅಬ್ದುಲ್ ರಹೀಮನ ಕುಟುಂಬಕ್ಕೆ ಸರಕಾರ 50 ಲಕ್ಷ ಪರಿಹಾರ ನೀಡಬೇಕು. ಕರಾವಳಿಯ ಈ ಘಟನೆಗೆ ಪೋಲೀಸ್ ಇಲಾಖೆಯ ವೈಫಲ್ಯ ಮತ್ತು ನಿರ್ಲಕ್ಷ್ಯ ಸ್ಪಷ್ಟವಾಗಿದ್ದು ಸರಕಾರವು ಕರಾವಳಿ ಪೋಲೀಸ್ ಇಲಾಖೆಯಲ್ಲಿ ಶೀಘ್ರದಲ್ಲೇ ಬದಲಾವಣೆ ತರಬೇಕು ಎಂದು ಎಸ್.ಕೆ.ಎಸ್.ಎಸ್.ಎಫ್ ದ.ಕ. ಈಸ್ಟ್ ಜಿಲ್ಲೆ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ದ.ಕ ಜಿಲ್ಲೆಯಲ್ಲಿ ಕೋಮು ಪ್ರೇರಿತ ಕೊಲೆಗಳ ಸರಣಿ ಮುಂದುವರಿಯುತ್ತಿದ್ದು, ಇದು ಸಾರ್ವಜನಿಕರನ್ನು ಭಯಭೀತರಾಗಿಸಿದೆ. ಜನ ಸಾಮಾನ್ಯರ ವಿಶೇಷವಾಗಿ ದಿನಕೂಲಿ ಕೆಲಸ ಮಾಡಿ ಬದುಕುವವರ ಬದುಕಿನ ದಾರಿಯನ್ನು ಇದು ಕುಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ಕೋಮು ದ್ವೇಷ ಭಾಷಣ ಮಾಡುವವನನ್ನು ಕೂಡಲೇ ಬಂಧಿಸಬೇಕು. ಈ ದುಷ್ಕೃತ್ಯದ ಕೊಲೆಗಾರರು ಮತ್ತು ಸಂಚು ರೂಪಿಸಿದವರ ವಿರುದ್ಧ ಕಠಿಣ ಕ್ರಮ ಕ್ಷಿಪ್ರವಾಗಿ ಜರಗಿಸಬೇಕು. ಈ ಸರಕಾರದ ಮೇಲೆ ನಮಗೆ ವಿಶ್ವಾಸವಿತ್ತು. ಆದರೆ ಅದು ಈಗ ದೂರವಾಗುತ್ತಿದೆ. ಗೃಹ ಸಚಿವರನ್ನು ತಕ್ಷಣ ಬದಲಾವಣೆ ಮಾಡಬೇಕು ಎಂದು ಎಸ್.ಕೆ.ಎಸ್.ಎಸ್.ಎಫ್ ದ.ಕ. ಈಸ್ಟ್ ಜಿಲ್ಲೆ ಸಮಿತಿ ಉಪಾಧ್ಯಕ್ಷ ಅಬ್ದುಲ್ ರಶೀದ್ ರಹ್ಮಾನಿ ಪರ್ಲಡ್ಕ ಒತ್ತಾಯಿಸಿದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಕೌಸರಿ, ಕಾರ್ಯದರ್ಶಿ ಅಶ್ರಫ್ ಮುಕ್ವೆ, ಕೋಶಾಧಿಕಾರಿ ಜಮಾಲ್ ಕೋಡಪದವು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!