ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಬಿಡುಗಡೆ

ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ.ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ.

ಅದರ ಬದಲು ಎಲ್‌ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ ಶನಿವಾರ ಮತ್ತು ಭಾನುವಾರ ಉಡುಪಿಯ ಪಿಪಿಸಿ ಆಡಿಟೋರಿಯಮ್ ನಲ್ಲಿ ಪ್ರದರ್ಶನ ಮಾಡಲಾಗುವುದು. ಶೋ ಮುಗಿದ ಬಳಿಕ ಕೆರಿಯರ್ ಗೈಡೆನ್ಸ್ ನಡೆಯಲಿದ್ದು, ಸಂದರ್ಶನದ ಭಯ ಹಾಗೂ ಪರೀಕ್ಕೆ ಭಯದ ಬಗ್ಗೆ ಇತರ ಪ್ರಶ್ನೆಗಳೇನಾದರೂ ಇದ್ದಲ್ಲಿ ಉತ್ತರಿಸಲಾಗುವುದು. ಇಲ್ಲದಿದ್ದಲ್ಲಿ ಬೇಕಾದ ವಿದ್ಯಾರ್ಥಿಗಳಿಗೆ, ಸಿನೆಮಾದಲ್ಲಿ ಹೇಳಲಾದ ಸ್ಪಡಿ ಟೆಕ್ನಿಕ್ಸ್ಗಳನ್ನು ಸವಿಸ್ತಾರವಾಗಿ ವಿವರಿಸಲಾಗುವುದು ಎಂದ್ರು. ಇದು ‘ಮಕ್ಕಳು ಆತ್ಮಹತ್ಯೆ ಮಾಡುವುದು, ‘ಮನೆ ಬಿಟ್ಟು ಓಡಿ ಹೋಗುವುದು ಇಂತಹ ನಾನಾ ರೀತಿಯ ಸಮಸ್ಯೆಗಳನ್ನು ತಂದೊಡ್ಡುವ ಪರೀಕ್ಷೆ ಹೆದರಿಕೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ತಯಾರಿಸಿರುವ ಶೈಕ್ಷಣಿಕ-ಸಾಮಾಜಿಕ ಚಲನಚಿತ್ರವಾಗಿದೆ. ಮನೆಯಲ್ಲಿಯೇ ಕುಳಿತು ನೋಡಲು ಅನುಕೂಲವಾಗುವಂತೆ ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕಲಾವಿದರಾದ ಅಶ್ವಿನಿ ಶೀತಲ್, ಪ್ರದೀಪ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!