ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೊನೆಗೂ ರಾಕೇಶ್ ಮನೆಗೆ ರಿಷಬ್ ಶೆಟ್ಟಿ ಭೇಟಿ, ಸಾಂತ್ವಾನ

ಕಾಮಿಡಿ ಕಿಲಾಡಿಗಳು ಶೋ ಮೂಲಕ ಮನೆಮಾತಾಗಿದ್ದ ನಟ ರಾಕೇಶ್ ಪೂಜಾರಿ ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ರು.

ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಕೂಡ ರಾಕೇಶ್ ಪೂಜಾರಿ ಅವರು ನಟಿಸುತ್ತಿದ್ರು. ಆದರೆ ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು. ಈಗ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.ರಾಕೇಶ್ ಪೂಜಾರಿ ನಿಧನರಾಗಿ 21 ದಿನಗಳು ಕಳೆದ ಬಳಿಕ ಅವರ ಮನೆಗೆ ರಿಷಬ್ ಶೆಟ್ಟಿ ಬಂದಿದ್ದಾರೆ. ರಾಕೇಶ್ ಪೂಜಾರಿ ಕುಟುಂಬಸ್ಥರಿಗೆ ರಿಷಬ್ ಶೆಟ್ಟಿ ಹಾಗು ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಂತ್ವಾನ ಹೇಳಿದ್ದಾರೆ. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ.

ರಿಷಬ್ ಶೆಟ್ಟಿ ಅವರು ಕಾಂತಾರ: ಚಾಪ್ಟರ್ 1 ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್‌ನಲ್ಲಿ ಕೂಡ ಅವರು ಪಾಲ್ಗೊಂಡಿದ್ರು. ಈ ಸಿನಿಮಾ ಮೇಲೆ ಅವರು ಸಖತ್ ಭರವಸೆ ಇಟ್ಟುಕೊಂಡಿದ್ರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನ ಹೊಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!