ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಳೆ ಕಾರಣ ಅಡಿಕೆ ಬೆಳೆಗಳಿಗೆ ಔಷಧಿ ಸಿಂಪಡಣೆ ವಿಳಂಬ; ರೈತರು ಕಂಗಾಲು..?!

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಈ ಬಾರಿ ಕೊಳೆ ರೋಗ ಬಾಧೆ ತಡೆಯಲು ಔಷಧಿ ಸಿಂಪಡಿಸುವುದಕ್ಕೆ ಎಡೆಬಿಡದೆ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ.

ಈ ವರ್ಷ ಮುಂಗಾರು ಮಳೆ ನಿರೀಕ್ಷೆಗಿಂತ ಮೊದಲೇ ಆರಂಭವಾಗಿರುವುದರಿ0ದ ರೈತರಿಗೆ ಅಡಿಕೆ ಕೊಳೆರೋಗಕ್ಕೆ ಸಂಬ0ಧಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಅಡಿಕೆ ತೋಟಗಳನ್ನು ಹೊಂದಿರುವ ಕೃಷಿಕರು ಇದುವರೆಗೆ ಮೇ ತಿಂಗಳ ಕೊನೆಯಲ್ಲಿ ಮೊದಲ ಸುತ್ತಿನ ಔಷಧಿ ಸಿಂಪರಣೆಯನ್ನು ಮಾಡುತ್ತಿದ್ದರು. ಈ ಬಾರಿ ಮೇ ತಿಂಗಳ ಕೊನೆಯಲ್ಲಿ ಮಳೆಬಂದಿರುವುದರಿ0ದ ಔಷಧಿ ಸಿಂಪರಣೆ ಸಾಧ್ಯವಾಗಿಲ್ಲ. ಮಳೆಗಾಲದಲ್ಲಿ ಅಡಿಕೆ ಬೆಳೆಯನ್ನು ಶಿಲೀಂಧ್ರಗಳಿ0ದ ಹರಡುವ ಕೊಳೆ ರೋಗ ಭಾರೀ ಪ್ರಮಾಣದಲ್ಲಿ ನಾಶ ಮಾಡುತ್ತದೆ. ಇದಕ್ಕೆ ಪರಿಹಾರವಾಗಿ ಬೋರ್ಡೋ ದ್ರಾವಣವನ್ನು ಔಷಧಿಯಾಗಿ ಸಿಂಪಡಿಸಲಾಗುತ್ತದೆ.

ಮಳೆಗಾಲ ಆರಂಭಕ್ಕೆ ಮೊದಲೇ ಒಂದು ಬಾರಿ ಈ ದ್ರಾವಣ ಸಿಂಪರಿಸಿದರೆ ಬಳಿಕ 2-3 ಬಾರಿ ಈ ದ್ರಾವಣವನ್ನು ರೋಗ ಹತೋಟಿಗಾಗಿ ಸಿಂಪಡಿಸಲಾಗುತ್ತದೆ. ಕಳೆದ ಬಾರಿಯೂ ಔಷಧಿ ಸಿಂಪಡಿಸಲು ಮಳೆ ಬಿಡುವು ನೀಡಿರಲಿಲ್ಲ. ಜೊತೆಗೆ ಕಳೆದ ಬೇಸಿಗೆಯಲ್ಲಿ ನೀರಿಲ್ಲದೆ ತೋಟಗಳು ಒಣಗಿದ್ದವು, ಸಹಜವಾಗಿ ಫಸಲೂ ಅರ್ಧಕ್ಕರ್ಧ ಕಡಿಮೆಯಾಗಿತ್ತು. ಈ ಬಾರಿ ಬೇಸಿಗೆಯಲ್ಲಿ ಮಳೆ ಬಂದುದರಿAದ ಉತ್ತಮ ಫಸಲು ನಿರೀಕ್ಷೆ ಇತ್ತು. ಆದರೆ ಕೊಳೆ ನಿಯಂತ್ರಣ ಸಾಧ್ಯವಾಗದಿದ್ದರೆ ಅಡಿಕೆ ಎಳತಾಗಿರುವಾಗಲೇ ಉದುರಿ ನಷ್ಟ ಸಂಭವಿಸುವ ಆತಂಕವನ್ನು ಕೃಷಿಕರು ಎದುರಿಸುತ್ತಿದ್ದಾರೆ. ಅಡಿಕೆಗೆ ಔಷಧಿ ಸಿಂಪಡಿಸಲು ನುರಿತ ಕಾರ್ಮಿಕರು ಅಗತ್ಯ, ಅವರ ಕೊರತೆಯೂ ಕೃಷಿಕರನ್ನು ಬಾಧಿಸುತ್ತಿದೆ. ಆಧುನಿಕ ಪರಿಹಾರಗಳು ಬಂದಿವೆಯಾದರೂ ಅವುಗಳು ಕಾರ್ಮಿಕರ ಕೊರತೆಗೆ ಪರಿಹಾರ ಹುಡುಕುವ ಮಾದರಿಗಳಾಗಿ ಅಭಿವೃದ್ಧಿ ಹೊಂದಿಲ್ಲ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!