ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮಂಗಳೂರಲ್ಲಿ ಶಾಂತಿ ನಿರ್ಮಾಣ ನಮ್ಮ ಗುರಿ”; ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ ಶಾಂತಿ ಸ್ಥಾಪನೆ ಅಗತ್ಯವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪ್ರತಿಪಾದಿಸಿದ್ದಾರೆ.

ಇದೇ ಸಂದರ್ಭ ಅವರು ಮಂಗಳೂರು ಮಣಿಪುರ ಆಗುವುದು ಬೇಡ ಎಂದೂ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ. ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರು, ಈ ಸರಣಿ ಹತ್ಯೆಗಳ ಷಡ್ಯಂತ್ರದ ಹಿಂದೆ ಅಡಗಿರುವ ಪಿತೂರಿದಾರರನ್ನು ಕಂಡು ಹಿಡಿಯಬೇಕು. ಇಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ರೂಪಿತವಾದ ಆ್ಯಂಟಿ ಕಮ್ಯುನಲ್ ಫೋರ್ಸ್ ಶೀಘ್ರವೇ ಕಾರ್ಯಾಚರಣೆ ನಡೆಸಲಿದೆ. ಹಿಂದೆ ಈ ಜಿಲ್ಲೆಯಲ್ಲಿ ಕೊಲೆ, ಶಾಂತಿ ಕದಡುವ ಪ್ರಯತ್ನಗಳು ನಡೆದಾಗ ಶಾಂತಿ ಸಭೆಗಳು ನಡೆಯುತ್ತಿದ್ದವು. ಆದರೆ ಈ ಶಾಂತಿ ಸಭೆಯಲ್ಲಿ ಕೆಲವು ಸಂಘಟನೆಗಳು ಭಾಗವಹಿಸುತ್ತಿರಲಿಲ್ಲ. ಆ ಸಂಘಟನೆಗಳಿಗೆ ಇಲ್ಲಿ ಶಾಂತಿ ಸ್ಥಾಪನೆಗೆ ಬದಲಾಗಿ ಸಂಘರ್ಷದ ವಾತಾವರಣ ಬೇಕಾಗಿರುತ್ತಿತ್ತು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ,ದಿನೇಶ್, ಪ್ರಕಾಶ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!