ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮಂಗಳೂರಲ್ಲಿ ಶಾಂತಿ ನಿರ್ಮಾಣ ನಮ್ಮ ಗುರಿ”; ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ ಶಾಂತಿ ಸ್ಥಾಪನೆ ಅಗತ್ಯವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಪ್ರತಿಪಾದಿಸಿದ್ದಾರೆ.

ಇದೇ ಸಂದರ್ಭ ಅವರು ಮಂಗಳೂರು ಮಣಿಪುರ ಆಗುವುದು ಬೇಡ ಎಂದೂ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ. ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರು, ಈ ಸರಣಿ ಹತ್ಯೆಗಳ ಷಡ್ಯಂತ್ರದ ಹಿಂದೆ ಅಡಗಿರುವ ಪಿತೂರಿದಾರರನ್ನು ಕಂಡು ಹಿಡಿಯಬೇಕು. ಇಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ರೂಪಿತವಾದ ಆ್ಯಂಟಿ ಕಮ್ಯುನಲ್ ಫೋರ್ಸ್ ಶೀಘ್ರವೇ ಕಾರ್ಯಾಚರಣೆ ನಡೆಸಲಿದೆ. ಹಿಂದೆ ಈ ಜಿಲ್ಲೆಯಲ್ಲಿ ಕೊಲೆ, ಶಾಂತಿ ಕದಡುವ ಪ್ರಯತ್ನಗಳು ನಡೆದಾಗ ಶಾಂತಿ ಸಭೆಗಳು ನಡೆಯುತ್ತಿದ್ದವು. ಆದರೆ ಈ ಶಾಂತಿ ಸಭೆಯಲ್ಲಿ ಕೆಲವು ಸಂಘಟನೆಗಳು ಭಾಗವಹಿಸುತ್ತಿರಲಿಲ್ಲ. ಆ ಸಂಘಟನೆಗಳಿಗೆ ಇಲ್ಲಿ ಶಾಂತಿ ಸ್ಥಾಪನೆಗೆ ಬದಲಾಗಿ ಸಂಘರ್ಷದ ವಾತಾವರಣ ಬೇಕಾಗಿರುತ್ತಿತ್ತು ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ,ದಿನೇಶ್, ಪ್ರಕಾಶ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!