ಜನ ಮನದ ನಾಡಿ ಮಿಡಿತ

Advertisement

ಪಾಣೆಮಂಗಳೂರು: ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ..!

ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಅವರು ಸಜ್ಜನ ರಾಜಕಾರಣಿ ಎಂದೇ ಚಿರಪರಿಚಿತರಾಗಿದ್ದರು. ಅವರ ಮಿತ್ರರು ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದಾರೆ. ಆರೋಗ್ಯ ಸಮಸ್ಯೆ ಅಥವಾ ಹಣಕಾಸಿನ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆAದು ಹೇಳಲಾಗುತ್ತಿದೆ. ಪಾಣೆಮಂಗಳೂರು ಸೇತುವೆ ಬಳಿ ದೊರೆತ ಮೊಬೈಲ್ ಸಂಖ್ಯೆಯನ್ನು ಪಡೆದು ಪೊಲೀಸರು ಕರೆ ಮಾಡಿದಾಗ, ಅದು ಪುತ್ತೂರಿನ ರಮೇಶ್ ರೈ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು. ಕೂಡಲೇ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಇದೀಗ ಕುಟುಂಬ ಸದಸ್ಯರು ಮೃತದೇಹವನ್ನು ಗುರುತಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮೃತರು ಪತ್ನಿ ಮೋಹಿನಿ, ಪುತ್ರ ವಿನೀಶ್, ಪುತ್ರಿ ವೀಕ್ಷಾ ಹಾಗೂ ಅಪಾರ ಕುಟುಂಬ ವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!