ಕಾಲ್ತುಳಿತ ಘಟನೆಗೆ ಸಂಬ0ಧಿಸಿ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆದಿದೆ.
ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಆರ್.ಸಿ.ಬಿ ವಿಜಯೋತ್ಸವವನ್ನು ಯಾವುದೇ ಪೂರ್ವಸಿದ್ಧತೆ ಇಲ್ಲದೆ ಆಯೋಜಿಸಿ, ಪ್ರಚಾರ ಗಿಟ್ಟಿಸಿಕೊಳ್ಳುವ ಕಾಂಗ್ರೆಸ್ ತೆವಲಿನಿಂದಾಗಿ ಕಾಲ್ತುಳಿತ ಉಂಟಾಗಿ 11 ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು. ಈ ಪ್ರಕರಣಕ್ಕೆ ಪೊಲೀಸರ ತಲೆದಂಡ ಪಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಸರ್ಕಾರ ತನ್ನ ವೈಫಲ್ಯವನ್ನು ಮರೆಮಾಚಲು ಪೊಲೀಸರ ತಲೆದಂಡ ಪಡೆದಿದೆ ಎಂದು ಆರೋಪಿಸಿದ್ದಾರೆ. ಇನ್ನು ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಲಾಲಾಜಿ ಮೆಂಡನ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ರು.