ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನಿಗೆ ಪೆಟ್ರೋಲ್ ಸುರಿದ ತಮ್ಮ..??!

ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಈ ಪ್ರಕರಣದಲ್ಲಿ ನಿಜವಾಗಿ ಬಿಟ್ಟಿದೆ. ರೈಲ್ವೇ ಟ್ರಾಕ್‌ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಯುವಕನನ್ನು 45ರ ಪ್ರಾಯದ ಹನುಮಂತಯ್ಯ ಎಂದು ಗುರುತಿಸಲಾಗಿದೆ.

ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮದ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದಾರೆ. ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ. ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

 

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!