ಜನ ಮನದ ನಾಡಿ ಮಿಡಿತ

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನಿಗೆ ಪೆಟ್ರೋಲ್ ಸುರಿದ ತಮ್ಮ..??!

ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಈ ಪ್ರಕರಣದಲ್ಲಿ ನಿಜವಾಗಿ ಬಿಟ್ಟಿದೆ. ರೈಲ್ವೇ ಟ್ರಾಕ್‌ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಯುವಕನನ್ನು 45ರ ಪ್ರಾಯದ ಹನುಮಂತಯ್ಯ ಎಂದು ಗುರುತಿಸಲಾಗಿದೆ.

ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮದ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದಾರೆ. ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ. ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

 

Leave a Reply

Your email address will not be published. Required fields are marked *

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

error: Content is protected !!