ಜನ ಮನದ ನಾಡಿ ಮಿಡಿತ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಮೇ 1, 2025 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ತಲವಾರಿನಿಂದ ಕೊಚ್ಚಿ ಕೊಲೆಗೈದಿದ್ರು. ಈ ಘಟನೆಯು ಕರಾವಳಿ ಭಾಗದಲ್ಲಿ ಭಾರೀ ಕೋಮು ಉದ್ವಿಗ್ನತೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.

ಈ ನಿರ್ಧಾರಕ್ಕೆ ಸುಹಾಸ್ ಶೆಟ್ಟಿಯವರ ತಾಯಿ ಸುಲೋಚನಾ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇದೇ ವೇಳೆ ಸುಹಾಸ್ ಶೆಟ್ಟಿಯವರ ತಾಯಿ ಸುಲೋಚನಾ ಅವರು, ತಮ್ಮ ಮಗನ ಕೊಲೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನನ್ನ ಮಗನನ್ನು ಚಿತ್ರಹಿಂಸೆಗೊಳಪಡಿಸಿ, ಭೀಕರವಾಗಿ ಕೊಲೆ ಮಾಡಲಾಗಿದೆ. ಆತ ಬಜರಂಗದಳ ಕಾರ್ಯಕರ್ತನಾಗಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ. ಕರ್ನಾಟಕ ಸರ್ಕಾರದ ಮೇಲೆ ನಮಗೆ ಯಾವುದೇ ನಂಬಿಕೆ ಇರಲಿಲ್ಲ. ರಾಜ್ಯ ಸರ್ಕಾರದ ಯಾವುದೇ ನಾಯಕರು ನಮ್ಮ ಮನೆಗೆ ಭೇಟಿ ನೀಡಿಲ್ಲ, ಏನಾಯಿತು ಎಂದು ವಿಚಾರಿಸಿಲ್ಲ. ಅವರು ಕೇವಲ ಮುಸ್ಲಿಂ ಸಮುದಾಯದವರೊಂದಿಗೆ ಸಭೆಗಳನ್ನು ನಡೆಸಿ ಹೋಗುತ್ತಿದ್ದರು. ಇದರಿಂದ ಸರ್ಕಾರ ಅವರ ಪರವಾಗಿದೆ ಎಂದು ಅನಿಸುತ್ತಿತ್ತು,” ಎಂದು ಸುಲೋಚನಾ ಅವರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

error: Content is protected !!