ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಹಿಂದೂ ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಒತ್ತಾಯಿಸಿತು.

ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದು ಮನವಿ ನೀಡಲು ಬಂದಾಗಲೂ ಉಡುಪಿ ಡಿಸಿ ಗೈರು ಹಾಜರಾಗಿದ್ದ ಬಗ್ಗೆ ಒಕ್ಕೂಟದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ರು. ಹಿಂದೂ ಕಾರ್ಯಕರ್ತರ ಖಾಸಗಿ ಜೀವನದ ವ್ಯಕ್ತಿತ್ವದ ಗೌರವವನ್ನು, ಘನತೆಯನ್ನು ಹಾಳು ಮಾಡಲಾಗುತ್ತಿದೆ. ಕೋಮು ಸೌಹಾರ್ದ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ದೂರಿದರು. ಮಧ್ಯರಾತ್ರಿ ಕಾರ್ಯಕರ್ತರ ಮನೆಗೆ ತೆರಳಿ ವಿಚಾರಣೆ ನಡೆಸುವುದು ಫೋಟೋ ತೆಗೆಯುವುದು ಸರಿಯಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಏನೇ ಬರೆದರು ಹಿಂದೂ ಕಾರ್ಯಕರ್ತರನ್ನು ಬಂಧನ ಮಾಡಲಾಗುತ್ತಿದೆ ಎಂದು ಅಕ್ಷೇಪಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ವಿಷಯದಲ್ಲಿ ಉನ್ನತ ಮಠದ ತನಿಖೆ ಆಗಬೇಕು, ಪೊಲೀಸರಿಂದ ಕಿರುಕುಳಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಪರಿಹಾರ ನೀಡಿ ಪೊಲೀಸರು ಲಿಖಿತ ಕ್ಷಮಾಪಣೆ ಕೇಳಬೇಕು ಎಂದು ಒತ್ತಾಯಿಸಿದ್ರು.

 

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!