ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಬ್ಬಿಣದ ಕಮಾನ್‌ನೊಳಗೆ ಸಿಲುಕಿಕೊಂಡ ಮೀನಿನ ಪಿಕಪ್ ವಾಹನ..!

ಪಾಣೆಮಂಗಳೂರು ಹಳೆಯ ಸೇತುವೆ ಮೂಲಕ ಘನ ವಾಹನಗಳ ಸಂಚಾರ ನಿಷೇಧ ಹೇರಿ ಹಾಕಲಾಗಿದ್ದ ಕಬ್ಬಿಣದ ಕಮಾನ್‌ನೊಳಗೆ ಪಿಕಪ್ ವಾಹನವೊಂದು ಸಿಲುಕಿಕೊಂಡ ಘಟನೆ ನಡೆದಿದೆ.

ಪಾಣೆಮಂಗಳೂರು ಉಕ್ಕಿನ ಸೇತುವೆ ಉಳಿಸುವ ಮತ್ತು ದುರ್ಬಲ ಸೇತುವೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಡಳಿತ ಅದೇಶ ಹೊರಡಿಸಿ, ಸುಮಾರು ವರ್ಷಗಳ ಬಳಿಕ ಸೇತುವೆಯ ಎರಡು ಭಾಗಗಳಲ್ಲಿ ಕಬ್ಬಿಣದ ಕಮಾನ್ ಅಳವಡಿಸಲಾಗಿತ್ತು. ಅದಾದ ಬಳಿಕ ಕಬ್ಬಿಣದ ಕಮಾನ್ ಗಳನ್ನು ಮರಳು ವಾಹನ ಸಾಗಾಟ ಮಾಡುವ ವಾಹನಗಳು ತೆಗೆದು ಸಂಚಾರ ಮಾಡುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ, ಅತ್ಯಂತ ಹೆಚ್ಚು ತೂಕದ ಕಬ್ಬಿಣದ ಕಂಬಗಳನ್ನು ಅಳವಡಿಸಿ ಅದರ ಮೇಲೆ ಅಷ್ಟೇ ತೂಕದ ಕಮಾನ್ ಗಳನ್ನು ಹಾಕಲಾಗಿತ್ತು. ಇದೀಗ ಮೀನು ಸಾಗಾಟದ ಪಿಕಪ್ ವಾಹನವೊಂದು ಬಂದು ಗುದ್ದಿದ ರಭಸಕ್ಕೆ ಘನಗಾತ್ರದ ಕಮಾನ್ ಉರುಳಿ ಕೆಲಗೆ ಬಿದ್ದಿದೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಒಂದು ಭಾಗದ ಕಮಾನ್ ತೆರವಾಗಿದೆ. ಘಟನೆಯ ಬಗ್ಗೆ ವಿಡಿಯೋ ವೈರಲ್ ಆಗಿದೆ. ವಿಡಿಯೋ ತೆಗೆಯಬೇಡಿ, ವೈರಲ್ ಆಗುತ್ತದೆ ಎಂಬ ಮಾತು ಕೂಡ ಇಲ್ಲಿ ವೈರಲ್ ಆಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!