ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪೊಲೀಸ್ ಗೂಂಡಾಗಿರಿ ಮುಂದುವರೆದರೆ ತಕ್ಕ ಪ್ರತಿಫಲ : ಬಿಜೆಪಿ ಎಚ್ಚರಿಕೆ

ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮುಂದುವರೆದರೆ ತಕ್ಕ ಪ್ರತಿಫಲ ಎದುರಿಸಬೇಕಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ, ಕಾನೂನಿನ ದುರ್ಬಳಕೆ ಮಾಡಿ ಏಕಪಕ್ಷೀಯವಾಗಿ ನಡೆಸುತ್ತಿರುವ ಬಲವಂತದ ಕ್ರಮಗಳ ಸಹಿತ ಇತ್ತೀಚಿನ ಘಟನಾವಳಿಗಳ ಬಗ್ಗೆ ಪರಾಮರ್ಶೆ ಮತ್ತು ಪರಿಶೀಲನೆ ನಡೆಸಲು ಜಿಲ್ಲೆಗೆ ಬಂದ ಬಿಜೆಪಿ ನಿಯೋಗದ ನೇತೃತ್ವ ವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ರು. ನಮ್ಮ ಕಾರ್ಯಕರ್ತರು ಸಮಾಧಾನದಿಂದ ಇದ್ದಾರೆ ಎನ್ನುವುದನ್ನು ದೌರ್ಬಲ್ಯ ಎಂದುಕೊಳ್ಳಬೇಡಿ. ಕಾರ್ಯಕರ್ತರ ಮನೆಗೆ ಮಧ್ಯರಾತ್ರಿ ನುಗ್ಗಿ ಪೊಲೀಸರು ಗೂಂಡಾಗಿರಿ ಮಾಡುವುದನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ. ಆಂದೋಲನ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲಾಡಳಿತ, ಎಸ್ಪಿ, ಕಮಿಷನರ್ ಭೇಟಿಯಾಗಿ ಇಲ್ಲಿಯ ಪರಿಸ್ಥಿತಿಯ ಕುರಿತು ಚರ್ಚಿಸಿದ್ದೇವೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಬಳಿಕ ಕಾನೂನು ಸುವ್ಯವಸ್ಥೆ ನೆಪದಲ್ಲಿ ಪೊಲೀಸ್ ಇಲಾಖೆ ಗೂಂಡಾ ವರ್ತನೆ ಮಾಡಲಾಗುತ್ತಿದೆ. ಕಾನೂನು ಮೀರಿದವರನ್ನು ದಂಡಿಸಿ ಆದರೆ ಓಲೈಕೆ ರಾಜಕಾರಣ ಬೇಡ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!