ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ಏಕಾಏಕಿ ಪೊಲೀಸ್ ದಾಳಿ

ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಸ್ನೇಹಿತರಿಗಾಗಿ ಮಂಗ್ಲಿ ಪಾರ್ಟಿ ಪ್ಲಾನ್ ಮಾಡಿದ್ದು, ಡ್ರಗ್ಸ್ ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಗಾಯಕಿ ಮಂಗ್ಲಿ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ತ್ರಿಪುರಾ ರೆಸಾರ್ಟ್ನಲ್ಲಿ ನಿನ್ನೆ ತಮ್ಮ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಿದ್ದರು.

ಪೊಲೀಸರು ಈ ಪಾರ್ಟಿ ಮೇಲೆ ರೇಡ್ ಮಾಡಿದ್ದು, ಕಾರ್ಯಕ್ರಮದ ಆಯೋಜಕರಿಂದ ಅಪಾರ ಪ್ರಮಾಣದ ವಿದೇಶಿ ಮದ್ಯ, ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಂಗ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಆಪ್ತ ಸ್ನೇಹಿತರು, ಕುಟುಂಬಸ್ಥರು ಸೇರಿ 48 ಮಂದಿಯಷ್ಟೇ ಭಾಗಿಯಾಗಿದ್ದರು. 48 ಮಂದಿಯ ಡ್ರಗ್ಸ್ ಪರೀಕ್ಷೆಯಲ್ಲಿ 9 ಜನಕ್ಕೆ ಡ್ರಗ್ಸ್ ಪಾಸಿಟಿವ್ ಬಂದಿದೆ. ಎನ್‌ಡಿಪಿಎಸ್ ಆ್ಯಕ್ಟ್ ಹಾಗೂ ಶಬ್ದ ಮಾಲಿನ್ಯ ಕಾಯಿದೆಯಡಿ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಹುಭಾಷಾ ಗಾಯಕಿ ಮಂಗ್ಲಿ ಅವರು ಪೊಲೀಸರ ಅನುಮತಿ ಪಡೆಯದೆ ಪಾರ್ಟಿ ಆಯೋಜನೆ ಮಾಡಿದ್ದಾರೆ.

ಪಾರ್ಟಿ ಮೇಲೆ ಏಕಾಏಕಿ ದಾಳಿ ಮಾಡಿರುವ ಪೊಲೀಸರು, ಅನುಮತಿಯಿಲ್ಲದೆ ಬಳಸಲಾಗಿದ್ದ ಡಿಜೆ ಸಿಸ್ಟಂ, ವಿದೇಶಿ ಮದ್ಯ ಹಾಗೂ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಗಾಂಜಾ ಸೇವನೆ ಮಾಡಿದ್ದ 9 ಜನರನ್ನು ಬಂಧಿಸಿ ಪರೀಕ್ಷೆ ನಡೆಸಿದ್ದಾರೆ. ಗಾಯಕಿ ಮಂಗ್ಲಿ ಹಾಗೂ ತ್ರಿಪುರಾ ರೆಸಾರ್ಟ್ ಜನರಲ್ ಮ್ಯಾನೇಜರ್ ಶಿವರಾಮ ಕೃಷ್ಣ ವಿರುದ್ಧ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!