ಜನ ಮನದ ನಾಡಿ ಮಿಡಿತ

Advertisement

ಮಧ್ಯ ಪ್ರದೇಶ: ಗಂಡನನ್ನ ಯಮಲೋಕಕ್ಕೆ ಕಳುಹಿಸಿದ್ಲು ಪತ್ನಿ..! ಕ್ಲೈಮಾಕ್ಸ್ !!

ಮಧ್ಯ ಪ್ರದೇಶದ ಇಂಧೋರ್ ನವ ಜೋಡಿಯ ಹನಿಮೂನ್ ಪ್ರಕರಣ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣ ನಡೆಸ್ತಿರುವ ಪೊಲೀಸರಿಗೆ ಒಂದೊಂದೇ ಅಸಲಿ ವಿಚಾರಗಳು ಗೊತ್ತಾಗುತ್ತಿವೆ. ರಾಜಾ ರಘುವಂಶಿ ಮೇಲೆ ಇಷ್ಟವಿಲ್ಲದೇ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿದ್ದ ಸೋನಂ ಮದ್ವೆಯಾದ ಮೂರೇ ದಿನಕ್ಕೆ ರಾಜಾ ರಂಘುವಂಶಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಳು ಅನ್ನೋದು ಈಗಾಗಲೇ ತಿಳಿದಿದೆ.

ತನಿಖೆಯಲ್ಲಿ ಗೊತ್ತಾಗಿರುವ ಮತ್ತೊಂದು ವಿಚಾರವೆಂದರೆ, ಹನಿಮೂನ್‌ಗೆ ಹೋದಾಗ ಮೆಘಾಲಯದಲ್ಲಿ ತನ್ನ ಸುಪಾರಿ ಪ್ಲಾನ್ ಸಕ್ಸಸ್ ಆಗದಿದ್ರೆ ಪ್ಲಾನ್-ಬಿ ರೆಡಿ ಮಾಡಿದ್ದಳಂತೆ! ಊಟದಲ್ಲಿ ವಿಷ ನೀಡಿ ಪ್ರಾಣ ತೆಗೆಯಲು ಪ್ಲಾನ್ ಮಾಡಿದ್ದಂತೆ.. ಇನ್ನು ಆರೋಪಿ ಸೋನಮ್‌ಗೆ ರಾಜು ಕುಶ್ವಾಹಾ ಜೊತೆ ಅಫೇರ್ ಇರೋದು ಆಕೆಯ ತಂದೆ-ತಾಯಿಗೆ ಮುಂಚೆಯೇ ಗೊತ್ತಿತ್ತು ಎಂದು ಮೃತ ರಾಜಾ ರಘುವಂಶಿ ಸೋದರ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ. ಸೋನಂ ತನ್ನ ತಾಯಿಯ ಬಳಿ ತಾನು ರಾಜು ಕುಶ್ವಾಹನ ಮದುವೆ ಆಗುತ್ತೇನೆ ಎಂದಿದ್ದಾಳೆ. ಆದರೆ ಇದಕ್ಕೆ ಆಕೆಯ ತಾಯಿ ಒಪ್ಪಿಲ್ಲ. ನಮ್ಮ ಸಮುದಾಯದವರ ಜೊತೆ ಮಾತ್ರವೇ ವಿವಾಹವಾಗಬೇಕು ಎಂದಿದ್ದರಂತೆ. ಅದಕ್ಕೆ ಸೋನಂ ನಾನು ಬೇರೆಯವರನ್ನು ಮದುವೆಯಾಗುತ್ತೇನೆ. ಆದರೆ ನಂತರ ಏನಾದರೂ ಅನಾಹುತವಾದರೆ ಅದಕ್ಕೆ ನಾನು ಹೊಣೆಯಲ್ಲ. ನನ್ನ ಮದುವೆಯಾದ ವ್ಯಕ್ತಿಗೆ ಏನು ಮಾಡುತ್ತೇನೆ ಅಂತಾ ನೋಡುತ್ತೀರಿ ಎಂದು ಎಚ್ಚರಿಕೆ ನೀಡಿದ್ದಳಂತೆ ಎಂದು ಹೇಳಿರುವ ವಿಚಾರವಾಗಿ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!