ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸುತ್ತಲೂ ಸಮುದ್ರವಿದ್ದರೂ ಇನ್ನೂ ಆರದ ಬೆಂಕಿ..?! ಬೆಂಕಿಯೋ ಬೆಂಕಿ

ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ.

ಸುತ್ತಲೂ ಸಮುದ್ರ ಇದ್ದರೂ ಹಡಗಿನ ಬೆಂಕಿ ನಂದಿಸಲು ಇನ್ನೂ ಕಷ್ಟವಾಗುತ್ತಿದೆ. ಬೆಂಕಿಯುಗುಳುತ್ತಲೇ ಇರುವ ಹಡಗನ್ನು 48 ಗಂಟೆ ಕಳೆದರೂ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಇದರಿಂದ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದೆ. ಕೊಲಂಬೊದಿ0ದ ಮುಂಬೈನ ನವಾ ಶೇವಾ ಬಂದರಿಗೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ ಹೆಚ್ಚು ಸುಡುವ ವಸ್ತುಗಳ ಉಪಸ್ಥಿತಿಯು ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಎರಡು ವಾರಗಳ ಹಿಂದೆ ಕೇರಳ ಕರಾವಳಿಯಲ್ಲಿ ಇತ್ತೀಚೆಗೆ MSC ELSA-3 ಮುಳುಗಿದ ನಂತರ ಭಯವು ಹೆಚ್ಚಾಗಿದೆ, ಆದರೆ ಹಡಗಿನಲ್ಲಿರುವ ಅಪಾಯಕಾರಿ ಸರಕುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಅಪಾಯಕಾರಿ ಸರಕುಗಳ ಜೊತೆಗೆ, ಹಡಗಿನಲ್ಲಿ ಸುಮಾರು 2,000 ಟನ್ ಇಂಧನವಿದೆ ಎಂದು ಅಂದಾಜಿಸಲಾಗಿದೆ. ಹಡಗಿನಲ್ಲಿದ್ದ ತಂಡದಲ್ಲಿ ಇಂಜಿನಿಯರ್‌ಗಳಿದ್ರೂ, ಇಂಜಿನ್ ವಿಭಾಗಗಳನ್ನು ಪರಿಶೀಲಿಸುತ್ತಿದ್ದರೂ ಇಂತಹ ಅವಘಡ ಸಂಭವಿಸಿರುವುದು ಆಶ್ಚರ್ಯ ಮೂಡಿಸಿದೆ. ಯಾವೊಂದು ಸಿಗ್ನಲ್ ಅನ್ನು ಕೂಡಾ ಹಡಗು ನೀಡಿರಲಿಲ್ಲವೇ ಎಂಬ ಪ್ರಶ್ನೆಗೂ ಸದ್ಯ ಉತ್ತರವಿಲ್ಲದಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!