ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ: ಗುಡ್ಡ ಕುಸಿದು ದುರಂತ ನಡೆದ ಮನೆಗೆ ಯು.ಟಿ.ಖಾದರ್ ಭೇಟಿ

ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.

ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!