ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಕುಂದಾಪುರ ಮಹಿಳೆಯ ನಾಪತ್ತೆ ಕೇಸ್ ; ಪ್ರೀತಿ ಹಂಗಾಮ, ಸೂಸೈಡ್ ಹೈಡ್ರಾಮಾ..?? ಅಸಲಿ ಕಹಾನಿ

ಕೆಲವೊಂದು ಭಾವನೆಗಳೇ ಹಾಗೆ ಅವುಗಳಿಗೆ ವಯಸ್ಸು, ಪರಿಸ್ಥಿತಿ, ಒಳ್ಳೆಯದು, ಕೆಟ್ಟದು ಹೀಗೆ ಯಾವುದರ ಪರಿವೂ ಇರುವುದಿಲ್ಲ. ಅಂತಹದೇ ಭಾವನೆಗಳ ಪೈಕಿ ಪ್ರೀತಿಯೂ ಒಂದು. ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂದಾಪುರ ಮಹಿಳೆ ಹೀನಾ ಕೌಸರ್ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡೆತ್ ನೋಟ್ ಬರೆದಿಟ್ಟು ಅಸಲಿಗೆ ಆಕೆ ಹೋಗಿದ್ದೆಲ್ಲಿಗೆ..? ತನ್ನ ಚಪ್ಪಲಿ, ಸ್ಕೂಟರ್ ಎಲ್ಲವನ್ನು ನದಿ ತೀರದಲ್ಲಿ ಬಿಟ್ಟು ಆಕೆ ಆಡಿದ ಸೂಸೈಡ್ ಹೈಡ್ರಾಮಾ ಹೇಗಿತ್ತು ಗೊತ್ತಾ?

ಈಕೆ ಕುಂದಾಪುರ ವಿಠ್ಠಲವಾಡಿ ನಿವಾಸಿ 33 ವರ್ಷದ ಹೀನಾ ಕೌಸರ್ ಅನ್ನುವ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ತಾಯಿಯ ಮನೆಯಲ್ಲಿ ವಾಸವಿದ್ಲು. ಇನ್ನು ಆಕೆಯ ಗಂಡ ವಿದೇಶದಲ್ಲಿ ಕೆಲ್ಸ ಮಾಡ್ತಾಯಿದ್ದು ಆಗಾಗ ಊರಿಗೆ ಬರ್ತಾ ಇದ್ನನಂತೆ. ಹೀಗೆ ಎಲ್ಲವು ಶಾಂತವಾಗೇ ಇತ್ತು. ಆದ್ರೆ ಜೂನ್ 8 ರಾತ್ರೋರಾತ್ರಿ ಹೀನಾ ಕೌಸರ್ ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ಳು . ಗಾಬರಿಕೊಂಡ ಆಕೆಯ ಮನೆಯವರು ಮೇಲಿಂದ ಮೇಲೆ ಆಕೆಗೆ ಕರೆ ಮಾಡಿದ್ರು. ಆದ್ರೆ ಯಾವುದೇ ಪ್ರಯೋಜನವಾಗ್ಲಿಲ್ಲ ಆಕೆಯ ಫೋನ್ ಆಗಲೇ ಸ್ವಿಚ್ ಆಫ್ ಆಗಿತ್ತು. ಇದ್ರಿಂದ ಮತ್ತಷ್ಟು ಗಾಬರಿಕೊಂಡ ಮನೆಯವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು .

ತಕ್ಷಣವೇ ಪೊಲೀಸರು ಕೂಡ ತನಿಖೆ ಆರಂಭಿಸಿದ್ರು. ಮರುದಿನ ನಸುಕಿನ ಜಾವ ನಾಲ್ಕು ಗಂಟೆಗೆ ಕೋಡಿ ಸೇತುವೆಯ ಬಳಿ ಹೀನಾ ಕೌಸರ್ ಚಪ್ಪಲಿಗಳು ಮತ್ತು ಆಕೆಯ ಸ್ಕೂಟರ್ ಪತ್ತೆಯಾಗಿತ್ತು. ಇದಕ್ಕೆ ಪುಷ್ಟಿ ಎಂಬAತೆ ಆಕೆ ಬರೆದಿದ್ದ ಡೆತ್ ನೋಟ್ ಕೂಡ ಪೋಲೀಸರ ಕೈ ಸೇರುತ್ತದೆ. ಎಲ್ಲವನ್ನು ತಾಳೆ ಹಾಕಿ ನೋಡಿದ ಪೊಲೀಸರು ಹೀನಾ ಕೌಸರ್ ನದಿಗೆ ಹಾರಿ ಸೂಸೈಡ್ ಮಾಡಿರಬಹುದೆಂದು ದೃಢವಾಗಿ ಊಹಿಸಿ ನದಿಯಲ್ಲಿ ಹುಡುಕಾಟ ಕೂಡ ಆರಂಭಿಸಿದ್ರು. ಅಗ್ನಿಶಾಮಕ ದಳದಿಂದ ಕಳೆದೆರಡು ದಿನಗಳಿಂದ ಹೀನ ಕೌಸರ್ ಗಾಗಿ ತೀವ್ರ ಶೋಧ ನಡೆತಿತ್ತು. ಎಲ್ಲವೂ ಮುಗಿಯಿತು ಇನ್ನೇನು ಆಕೆಯ ಮೃತದೇಹ ಸಿಕ್ಕಿಯೇ ಬಿಡುತ್ತದೆ ಎಂಬುವಷ್ಟರಲ್ಲಿ ಇದೀಗ ಈ ಪ್ರಕರಣಕ್ಕೆ ಅನೀರಿಕ್ಷಿತ ಟ್ವಿಸ್ಟ್ ಒಂದು ಸಿಕ್ಕಿದೆ. ಅಸಲಿಗೆ ಹೀನಾ ನದಿಗೆ ಹಾರಿಯೇ ಇಲ್ಲ ಡೆತ್ ನೋಟ್, ಚಪ್ಪಲಿ, ಸ್ಕೂಟರ್ ಎಲ್ಲವನ್ನು ಸಿಗುವಂತೆ ಮಾಡಿ ಸೂಸೈಡ್ ಹೈಡ್ರಾಮಾ ಆಡಿದ್ದಳು. ಅಷ್ಟಕ್ಕೂ ಆಕೆ ಸಾಯುವ ನಾಟಕ ಆಡಿದ್ಯಾಕೆ? ಅನ್ನೋ ಪ್ರಶ್ನೆಗೆ ಮತ್ತದೇ ಉತ್ತರ ಪ್ರೀತಿ. ಹೌದು ಹೀನಾ ಸೂಸೈಡ್ ಡ್ರಾಮಾವಾಡಿ 26 ವರ್ಷದ ಸಾಹಿಲ್ ಅನ್ನುವ ಯುವಕನ ಜೊತೆ ಪರಾರಿಯಾಗಿದ್ದಾಳೆ. ಎರಡು ಮಕ್ಕಳ ತಾಯಿ ಗಂಡ, ಮಕ್ಕಳು ಎಲ್ಲವನ್ನು ಮರೆತು ಹುಚ್ಚು ಪ್ರೀತಿ ಹರಸಿ ತನ್ನಗಿಂತ ಏಳು ವರ್ಷ ಚಿಕ್ಕವನ ಜೊತೆ ಓಡಿಹೋಗಿದ್ದಾಳೆ ಅಂದ್ರೆ ಪ್ರೀತಿಗೆ ನಿಜಕ್ಕೂ ಕಣ್ಣು ಕಾಣೋದಿಲ್ಲ ಅನ್ನೋದು ಮತ್ತೆ ಸಾಬೀತಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!