ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ವಿಟ್ಲ ಠಾಣಾ ಎಸ್.ಐ. ಕೌಶಿಕ್ ಬಿ.ಸಿ. ಕರ್ತವ್ಯದಿಂದ ಅಮಾನತು

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ಬಿ.ಸಿ.ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಠಾಣಾ ಎಸ್.ಐ. ಕೌಶಿಕ್ ಬಿ. ಕೌಶಿಕ್ ಬಿ ಸಿ,ರವರು ದಾಳಿ ನಡೆಸಿದ್ರು. ಈ ವೇಳೆ ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ರು, ಮಾತ್ರವಲ್ಲದೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡು ಬಂದಿತ್ತು. ಆರೋಪಿಗಳ ಸಹಿತ ಸೊತ್ತನ್ನು ವಶಕ್ಕೆ ಪಡೆದು ಕೊಳ್ಳಬೇಕಿದ್ದ ಎಸ್.ಐ. ಕೌಶಿಕ್‌ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳದೇ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಸ್.ಐ. ಕೌಶಿಕ್ ರವರ ಮೇಲೆ ಮೇ.12ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!