ಜನ ಮನದ ನಾಡಿ ಮಿಡಿತ

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.

ಲಂಡನ್‌ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್‌ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್‌ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.

ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

error: Content is protected !!