ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಬ್ರಹ್ಮಾವರ ಭರಣಿ ಪೆಟ್ರೋಲ್ ಬಂಕ್ ಮುಂಭಾಗದ ಕಾಂಪ್ಲೆಕ್ಸ್ಗಳಿಗೆ ನೀರು ನುಗ್ಗಿದ್ದು, ಮುಂಜಾನೆಯಿ0ದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಸೃಷ್ಟಿಯಾಗಿದೆ. ರಿಪೇರಿಗೆ ತಂದಿರಿಸಲಾಗಿದ್ದ ಕಾರುಗಳು, ದುಬಾರಿ ಉಪಕರಣಗಳು ನೀರಿನಲ್ಲಿ ಮುಳುಗುವ ಆತಂಕ ಎದುರಾಗಿದ್ದು, ಬ್ರಹ್ಮಾವರ ವಾರಂಬಳ್ಳಿ ಗ್ರಾಮ ಪಂಚಾಯತ್ಗೆ ಸಮಸ್ಯೆ ಪರಿಹರಿಸುವಂತೆ ಬೇಡಿಕೆ ಇಡಲಾಗಿದೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಕಣ್ಣಿದ್ದು ಕುರುಡರಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ವರ್ತಿಸುತ್ತಿದೆ.