ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಪ್ರಧಾನ ಅರ್ಚಕ ನರಸಿಂಹ ಅಡಿಗರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆದಿದೆ. ಗೃಹ ಸಚಿವರೊಂದಿಗೆ ದೇವಳಕ್ಕೆ ಸಚಿವ ಮಂಕಾಳ್ ವೈದ್ಯ ಆಗಮಿಸಿದ್ದಾರೆ. ಗೃಹ ಸಚಿವರಿಗೆ ಪಕ್ಷದ ನಾಯಕರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.