ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಯುವವಾಹಿನಿ ಘಟಕದ ಆಶ್ರಯದಲ್ಲಿಆಟಿದೊಂಜಿ ದಿನ ದ ಗೌಜಿ

ಮುಲ್ಕಿ: ಯುವವಾಹಿನಿ ಘಟಕದ ಆಶ್ರಯದಲ್ಲಿ 21ನೇ ವರ್ಷದ ಆಟಿದೊಂಜಿ ದಿನ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ಮಾಧವ ಪೂಜಾರಿ ಕಿಲ್ಪಾಡಿ ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಯಮಿ ಶೈಲೇಂದ್ರ ವೈ ಸುವರ್ಣ ರವರು ಹಿಂದಿನ ಕಾಲದ ನಿರ್ಮಾಣಗೊಂಡ ಅಡುಗೆ ಕೋಣೆಯ ಒಳಗಡೆ ಒಲೆಯಲ್ಲಿಟ್ಟ ಪಾತ್ರೆಯಲ್ಲಿ ಬೆಂದ ಹಲಸಿನ ಗಟ್ಟಿಯನ್ನು ಅತಿಥಿಗಳಿಗೆ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿ ಸಂಘಟನೆಗಳ ಯಶಸ್ವಿ ಕಾರ್ಯಕ್ರಮಗಳಿಗೆ ಹಿರಿಯರ ಶ್ರಮ ಅಪಾರವಾಗಿದ್ದು ಮುಲ್ಕಿಯ ಯುವ ವಾಹಿನಿ ಸಂಘಟನೆಯು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಯುವ ಜನಾಂಗವನ್ನು ಸಂಘಟಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ಶ್ಲಾಘನೀಯ ಎಂದರು.


ತುಳು ಚಿತ್ರ ರಂಗದ ಕಲಾವಿದ ಭೋಜರಾಜ್ ವಾಮಂಜೂರು ರವರು ಮಾತನಾಡಿ ಮುಲ್ಕಿ ಯುವವಾಹಿನಿ ಘಟಕವು ಹಿಂದಿನ ಕಾಲದ ಪರಂಪರೆ, ಸಂಸ್ಕಾರ ಸಂಸ್ಕೃತಿ ಉಳಿಸಿಕೊಂಡು ಸಮಾಜದಲ್ಲಿ ಅಸಹಾಯಕರಿಗೆ ಸಹಾಯ ಹಸ್ತದ ಮೂಲಕ ಉತ್ತಮ ಕಾರ್ಯಕ್ರಮಗಳು ಅಭಿನಂದನೀಯ ಎಂದರು.
ಆಟಿಯ ಆಚರಣೆ ಕುರಿತು ಮಂಗಳೂರಿನ ಸಂತ್ ಅಗ್ನೇಸ್ ಕಾಲೇಜಿನ ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ,ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಯರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತುಳು ಚಿತ್ರ ನಿರ್ಮಾಪಕ ಸಂದೇಶ್ ರಾಜ್ ಬಂಗೇರರನ್ನು ಸನ್ಮಾನಿಸಲಾಯಿತು.
ಆಟಿಯ ಆಚರಣೆಗೆ ಬಂದ ಅತಿಥಿಗಳಿಗೆ ಅರೆಪುದಡ್ಡೆ, ಚಾ, ಬಾಯಿ ಬಚ್ಚೆಲ್, ಕಡ್ಲೆ, ಹಪ್ಪಳ, ಮಧ್ಯಾಹ್ನ ಆಟಿದ ಅಟಿಲ್‌ನಲ್ಲಿ ಕುಕ್ಕುದ ಉಪ್ಪಡ್, ತಿಮರೆ ಚಟ್ನಿ, ಉಪ್ಪಡ್ ಪಚ್ಚೀರ್, ಕುಡುತ್ತ ಚಟ್ನಿ, ಕುಕ್ಕುದ ಚಟ್ನಿ, ತೊರ್ಜಕ್ ನುರ್ಗೆ ಸೊಪ್ಪು, ತೇವು ತೇಟ್ಲ, ಕುಡುತ ಸಾರ್, ತೇವು ಪದ್ಪೆ, ಪೆಲಕಾಯಿದ ಗಟ್ಟಿ, ಮೆತ್ತೆದ ಗಂಜಿಯ ತಿನಿಸುಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಟಿಯ ಸಂಭ್ರಮ ಕ್ಕೆ ಸಾಕ್ಷಿಯಾಯಿತು. ಚಲನಚಿತ್ರ ನಟ ಭೋಜರಾಜ ವಾಮಂಜೂರು ತುಳು ಪದ್ಯ ಹಾಡಿ ಮನರಂಜನೆ ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!