ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಡುರಾತ್ರಿ ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.

ಕರಿಬಸಪ್ಪ ಮತ್ತು ಮಗಳು ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ನಡುರಾತ್ರಿ ಕುಮಾರ್ ಎಂಬ ಆರೋಪಿ ಮನೆಗೆ ನುಗ್ಗಿ ಕತ್ತಿಯಿಂದ ಕರಿಬಸಪ್ಪನಿಗೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಎಚ್ಚರಗೊಂಡ ಮಗಳು ಜೋರಾಗಿ ಕಿರುಚಿಕೊಂಡಿದ್ದಾಳೆ. ಇದರಿಂದ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಹಲ್ಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ವಿಚಾರವನ್ನು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ತಿಳಿಸಿದ್ದು ಬಳಿಕ ಬಂದ ಅವರು ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ಕರಿಬಸಪ್ಪ ಪ್ರಾಣಪಾಯದಿಂದ ಪಾರಾಗಿದ್ದಾರೆ. ಪೆಟ್ಟು ಸ್ವಲ್ಪ ಕೆಳಗೆ ಬಿದ್ದಿದ್ದರೆ ವ್ಯಕ್ತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಕೂಡಲೇ ವಿಶು ಶೆಟ್ಟಿ ತನ್ನ ವಾಹನದಲ್ಲಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ವೆಸ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮುಖಾಂತರ ಕಳುಹಿಸಿದ್ದಾರೆ.ಪ್ರಕರಣದ ಬಗ್ಗೆ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿ ಕುಮಾರನನ್ನು ಬಂಧಿಸಿ, ಹಲ್ಲೆ ಮಾಡಿದ ಕತ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!