ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ಹುಣಸೂರಿನ ಎಸ್ ಶ್ರೇಯಸ್

ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ನಮ್ಮ ಹುಣಸೂರಿನ ಕುವರ ಎಸ್ ಶ್ರೇಯಸ್ ರನ್ನು ಸತ್ಯಪ್ಪ ಹಾಗೂ ಗೌರಿಶಂಕರ್ ರವರ ನೇತೃತ್ವದಲ್ಲಿ ಇಂದು ಮಧು ಗ್ರೂಪ್ಸ್ ಹೂಟಗಳ್ಳಿ ಕಚೇರಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸತ್ಯಪ್ಪ ರವರು ಮಾತನಾಡಿ ಕೇಂದ್ರ ಲೋಕಸೇವಾ ಯುಪಿಎಸ್ ಸಿ ನಡೆಸುವ ಕೇಂದ್ರೀಯ ಪೊಲೀಸ್ ಶಶಸ್ತ್ರ ಪಡೆ ಪರೀಕ್ಷೆ 2024ರಲ್ಲಿ ಸಿಎಪಿಎಫ್ ಎಸ್ ಶ್ರೇಯಸ್ ದೇಶಕ್ಕೆ 5ನೇ ರ‍್ಯಾಂಕ್ ಪಡೆದಿದ್ದು ಕರ್ನಾಟಕ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದು ಇವರು ನಮ್ಮ ಹುಣಸೂರು ತಾಲೂಕಿನವರಾಗಿದ್ದು ಕಸಬಾ ಹೋಬಳಿ ಮರದೂರು ಗ್ರಾಮದ ಎಚ್‌ಎಸ್ ಸಿದ್ದರಾಮೇ ಗೌಡ ಹಾಗೂ ಸುಜಾತಾ ದಂಪತಿಗಳ ಪುತ್ರರಾಗಿದ್ದಾರೆ. ಈ ಹುಡುಗನ ತಂದೆ ಎಚ್‌ಎಸ್ ಸಿದ್ದರಾಮೇಗೌಡ ರವರು, ಇವರು ರೈತ ಕುಟುಂಬಕ್ಕೆ ಸೇರಿದವರಾಗಿರುತ್ತಾರೆ. ತಾಲೂಕಿಗೆ ಕೀರ್ತಿ ತಂದ ಎಸ್ ಶ್ರೇಯಸ್ ರವರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ತಮ್ಮ ಓದಿನೊಂದಿಗೆ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತಮ್ಮ ತಂದೆ ತಾಯಿಗಳಿಗೆ ಹೆಮ್ಮೆ ತರುವುದಲ್ಲದೆ ತಮ್ಮ ಜೀವನವನ್ನು ಯಶಸ್ವಿಗೊಳಿಸಿಕೊಳ್ಳಬಹುದು ಎಂದು ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿರುವ ವಿದ್ಯಾವಂತ ಯುವಕ ಯುವತಿಯರಿಗೆ ಸಲಹೆ ನೀಡಿದ್ದಾರೆ. ಗೌರಿಶಂಕರ್ (ಮಧು ಬಿಳಿಕೆರೆ) ಅವರು ಮಾತನಾಡಿ ಗ್ರಾಮೀಣ ಪ್ರದೇಶದ ರೈತರ ಮಗ ಯುಪಿಎಸ್ಸಿಯಲ್ಲಿ ರ‍್ಯಾಂಕ್ ಬಂದಿರುವುದು ಒಂದು ಹೆಮ್ಮೆಯ ವಿಷಯ. ವಿದ್ಯಾರ್ಥಿಗಳು ಇವರ ಆದರ್ಶದಲ್ಲಿ ಮುಂದುವರಿಯಬೇಕೆ0ದು ಹೇಳಿದರು. ಈ ಸಂದರ್ಭದಲ್ಲಿ ಲೋಕೇಶ್ ಅಸಿಸ್ಟೆಂಟ್ ಡಿಫೆನ್ಸ್ ಎಸ್ಟೇಟ್ ಆಫೀಸರ್, ಲೋಕೇಶ್ ಉದ್ಯಮಿಗಳು, ಮೋಹನ್ ಮಾಜಿ ಸೈನಿಕರು, ಶಿವಶಂಕರ್ (ಮನು), ಶಿವರಾಜೆ ಗೌಡ ನಿವೃತ್ತ ಡೆಪ್ಯುಟಿ ತಹಸಿಲ್ದಾರ್, ವಿಷ ಕಂಠೇಗೌಡ, ಮಂಜುನಾಥ ಬ್ರಿಕ್ಸ್ ಮಾಲೀಕರು ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!