ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲೊಬ್ಬಳು ದೋಣಿ ಮುನ್ನಡೆಸುವ ಸಾಹಸಿ ಮಹಿಳೆ..!

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ.

ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ ಹೊರಜಗತ್ತಿನ ಸಂಪರ್ಕ ಪಡೆಯಲು ಈ ಮಹಿಳೆ ನೆರವಾಗುತ್ತಿದ್ದಾಳೆ. ಹಗಲಲ್ಲಿ ಪುರುಷರು ಕೆಲಸದ ನಿಮಿತ್ತ ಹೋಗುವ ಕಾರಣ ತಾನೇ ದೋಣಿ ಮುನ್ನಡೆಸುವ ಕಾಯಕ ಕೈಗೆತ್ತಿಕೊಂಡು ಶಾಲಾ ಮಕ್ಕಳು ಮತ್ತು ಊರಿನ ಜನರನ್ನ ನದಿ ದಾಟಿಸುತ್ತಿದ್ದಾಳೆ. ಸೌಪರ್ಣಿಕ ನದಿಯ ಸೇತುವೆ ನಿರ್ಮಾಣದ ಕುರಿತು ಊರಿನವರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಕುರಿತು ಜನಪ್ರತಿನಿಧಿಗಳು ಇನ್ನೂ ಮೌನವಾಗಿರುವುದು ವಿಪರ್ಯಾಸ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಲ್ಲಿ ದೋಣಿಯ ಮೂಲಕ ರಸ್ತೆ ದಾಟುವುದರಿಂದ ಅಪಾಯವೇ ಹೆಚ್ಚು. ಆದ್ದರಿಂದ ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ ಎಂಬುದು ಊರವರ ಒಕ್ಕೊರಲಿನ ಕೂಗು. ಸದ್ಯ ಮಹಿಳೆಯ ಸಾಹಸಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!