ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲೊಬ್ಬಳು ದೋಣಿ ಮುನ್ನಡೆಸುವ ಸಾಹಸಿ ಮಹಿಳೆ..!

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ.

ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ ಹೊರಜಗತ್ತಿನ ಸಂಪರ್ಕ ಪಡೆಯಲು ಈ ಮಹಿಳೆ ನೆರವಾಗುತ್ತಿದ್ದಾಳೆ. ಹಗಲಲ್ಲಿ ಪುರುಷರು ಕೆಲಸದ ನಿಮಿತ್ತ ಹೋಗುವ ಕಾರಣ ತಾನೇ ದೋಣಿ ಮುನ್ನಡೆಸುವ ಕಾಯಕ ಕೈಗೆತ್ತಿಕೊಂಡು ಶಾಲಾ ಮಕ್ಕಳು ಮತ್ತು ಊರಿನ ಜನರನ್ನ ನದಿ ದಾಟಿಸುತ್ತಿದ್ದಾಳೆ. ಸೌಪರ್ಣಿಕ ನದಿಯ ಸೇತುವೆ ನಿರ್ಮಾಣದ ಕುರಿತು ಊರಿನವರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಕುರಿತು ಜನಪ್ರತಿನಿಧಿಗಳು ಇನ್ನೂ ಮೌನವಾಗಿರುವುದು ವಿಪರ್ಯಾಸ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಲ್ಲಿ ದೋಣಿಯ ಮೂಲಕ ರಸ್ತೆ ದಾಟುವುದರಿಂದ ಅಪಾಯವೇ ಹೆಚ್ಚು. ಆದ್ದರಿಂದ ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ ಎಂಬುದು ಊರವರ ಒಕ್ಕೊರಲಿನ ಕೂಗು. ಸದ್ಯ ಮಹಿಳೆಯ ಸಾಹಸಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!