ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವಿಪರೀತ ಮೊಬೈಲ್ ಬಳಸುತ್ತಾಳೆಂದು ಪತ್ನಿಯನ್ನು ಕೊಂದ ಪತಿ

ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.

ಹೊಸಮಠ ನಿವಾಸಿ 27ರ ಹರೆಯದ ರೇಖಾ ಕೊಲೆಯಾದ ಮಹಿಳೆ. ಈಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ 42 ರ ಹರೆಯದ ಗಣೇಶ ಪೂಜಾರಿ ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಪತ್ನಿ ಯಾವಾಗಲೂ ವಿಪರೀತ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಮದ್ಯಪಾನ ಮಾಡಿಕೊಂಡು ಬಂದು ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಕಡಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರೇಖಾ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾಳೆ. ಬಳಿಕ ಆರೋಪಿ ಗಣೇಶ್ ಪೂಜಾರಿ ಮನೆಯಿಂದ ಓಡಿ ಹೋಗಿದ್ದನು. ತಕ್ಷಣವೇ ಕಾರ್ಯಾಚರಣೆಗೆ ಇಳಿದ ಶಂಕರನಾರಾಯಣ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ರೇಖಾ ಪೂಜಾರಿ ಹಾಗೂ ಆರೋಪಿ ಗಣೇಶ ಪೂಜಾರಿ ದಂಪತಿಗಳಿಗೆ 6 ವರ್ಷ ಮತ್ತು 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!