ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಪರೂಪದ ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿಯನ್ನ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದ್ರು. ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರು ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ರು. ಅನಂತರ, ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಹಿಡಿದು, ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಚಿಪ್ಪು ಹಂದಿ ಒಂದು ಸಸ್ತನಿ ಆಗಿದ್ದು, ಮಣ್ಣು ಮತ್ತು ಮರದ ಪೊಟರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!