ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ನಗರದಲ್ಲಿ ಅಪಾಯ ಆಹ್ವಾನಿಸುತ್ತಿರುವ ಅನುಪಯುಕ್ತ ಸಿಗ್ನಲ್ ಕಂಬಗಳು!

ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್‌ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು.

ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು ಬಳಿಕ ತಮ್ಮ ಕರ್ತವ್ಯಗಳನ್ನು ನಿಲ್ಲಿಸಿದ್ದವು. ಸದ್ಯ ಕಬ್ಬಿಣದ ಸಿಗ್ನಲ್ ಕಂಬಗಳು ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮಳೆ ಗಾಳಿಗೆ ಧರೆಗೆ ಉರುಳುವ ಸಾಧ್ಯತೆ ಇದೆ. ನಗರಸಭೆಯು ತಕ್ಷಣ, ನಗರದಲ್ಲಿರುವ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಿ ಸಂಭವನೀಯ ದುರಂತಗಳನ್ನು ತಪ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ. ಹಳೆ ತಾಲೂಕು ಕಛೇರಿ ಬಳಿ ಇರುವ, ಕೆನರಾ ಬ್ಯಾಂಕ್ ಎದುರಲ್ಲಿಯೂ ಸಿಗ್ನಲ್ ಕಂಬವೊ0ದು ತುಂಡಾಗಿದ್ದು, ವಾಹನಗಳ, ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆ ಕಂಡುಬ0ದಿದೆ. ಹಳೆ ಡಯಾನಾ ಸರ್ಕಲ್ ಬಳಿಯ ಪಾದಚಾರಿ ರಸ್ತೆಯ ಮೇಲೆ ಕೆಲವು ವರ್ಷಗಳಿಂದ ಸಿಗ್ನಲ್ ಕಂಬಗಳು ಇಡಲಾಗಿದೆ. ಈಗ ಆ ಕಂಬಗಳ ಸುತ್ತಲು ಗಿಡ ಗಂಟಿ ಬೆಳೆದುನಿಂತಿದ್ದು, ವಿಷ ಜಂತುಗಳಿಗೆ ಆಶ್ರಯವಾದಂತಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!