ಜನ ಮನದ ನಾಡಿ ಮಿಡಿತ

Advertisement

ಮರೋಳಿ: ಸೆಪ್ಟಂಬರ್ 27ರಂದು ಮರೋಳಿಯಲ್ಲಿ 20ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸೆಪ್ಟಂಬರ್ 27ರಂದು ಮರೋಳಿ ಜೋಡುಕಟ್ಟೆಯ ಸಮಾಜ ಸೇವಾ ಪ್ರತಿಷ್ಠಾನದ ಆವರಣದ ವಜ್ರಕಾಯ ರಂಗ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಸ್ವಾತಂತ್ರöಪೂರ್ವದಲ್ಲಿ ಜನರಲ್ಲಿ ಒಗ್ಗಟ್ಟು ಮೂಡಿಸಲು ಬಾಲಗಂಗಾಧರ ತಿಲಕ್ ಅವರ ಚಿಂತನೆಯಲ್ಲಿ ಮೂಡಿಬಂದಂತಹ ಸಾರ್ವಜನಿಕ ಶ್ರೀಗಣೇಶೋತ್ಸವ ಅಂದು ಬಹಳ ಮಹತ್ವವನ್ನು ಪಡೆದುಕೊಂಡಿತ್ತು. ಇದೇ ಹಾದಿಯಲ್ಲಿ ಸಾಗಿರುವ ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧಾರ್ಮಿಕ ಚಿಂತನೆಯನ್ನಿರಿಸಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವಾ ಪ್ರತಿಷ್ಠಾನ ಬರಿಯ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡದ್ದು ಮಾತ್ರವಲ್ಲದೆ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕೆ ಕೆಂಬಾರ್. ಕೋಶಾಧಿಕಾರಿ ಹರೀಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಆಡಳಿತ ಮೊಕ್ತೇಸರ ಗುಡ್ಡೆ ಗುತ್ತು ಗಣೇಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಿರಿಧರ್ ಶೆಟ್ಟಿ. ನಿಕಟಪೂರ್ವ ಕಾರ್ಪೊರೇಟರ್ ಕೇಶವ ಮರೋಳಿ, ಜಯರಾಂ ಮರೋಳಿ, ರೋಹಿತಾಕ್ಷ ಮರೋಳಿ, ಜ್ಯೋತಿ ಕುಮಾರ್, ರತನ್ ಶೆಟ್ಟಿ ಕಂಕನಾಡಿ, ನವೀನ್ ಪ್ರಭು, ಆಶಾ ರಾಜೀವ್, ಪ್ರಶಾಂತ್ ಮರೋಳಿ, ಕಿಶೋರ್ ಶೆಟ್ಟಿ ಸೂರ್ಯನಗರ, ಭವಾನಿ ಶಂಕರ್ ಮರೋಳಿ, ಸರಳ ಎಸ್, ರಾಘವೇಂದ್ರ ಶೆಟ್ಟಿ, ತುಷಾರ್ ಎ. ಕೆಂಬಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!