ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಡಲ ಕಿನಾರೆಯಲ್ಲಿ ಪದ್ಮಾಸನದ ಮರಳು ಶಿಲ್ಪ ಕಲಾಕೃತಿ

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡಿ ಎಂದು ಜಗತ್ತಿಗೆ ಸಾರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಯೋಗವನ್ನು ಜನಪ್ರಿಯಗೊಳಿಸಿದ ದಿನ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ಮನಗಂಡು ಅದನ್ನು ಜನಪ್ರಿಯಗೊಳಿಸಿದ ಪರಿಣಾಮವಾಗಿ ಯೋಗದ ಬಗ್ಗೆ ಜನರಲ್ಲಿ ವ್ಯಾಪಕವಾದ ಜನಜಾಗೃತಿ ಉಂಟಾಗಿದೆ. ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಮುನ್ನಾ ಉಡುಪಿ ಜಿಲ್ಲೆಯ ಕೋಡಿ ಹಳೆ ಅಳಿವೆ ಬಳಿಯ ಕಡಲ ಕಿನಾರೆಯಲ್ಲಿ ಪದ್ಮಾಸನದ ಮರಳು ಶಿಲ್ಪವನ್ನು ರೂಪಿಸಿ ಜನರ ಗಮನ ಸೆಳೆಯಲಾಗುತ್ತಿದೆ. ಈ ಮರಳು ಉಬ್ಬು ಶಿಲ್ಪವು ಯೋಗದ ಮಹತ್ವವನ್ನು ಸಾರುವ ಜೊತೆಗೆ ಅದರ ಆಸನಗಳ ಪರಿಚಯವನ್ನು ಮಾಡಿಸುವಂತಿದೆ. ಪದ್ಮಾಸನದಲ್ಲಿರುವ ಈ ಶಿಲ್ಪವನ್ನು ಸ್ಯಾಂಡ್ ಥೀಮ್ ಉಡುಪಿ ತಂಡ ರಚಿಸಿದೆ. ಯೋಗಪಟುವನ್ನು ಕೇಂದ್ರವಾಗಿಟ್ಟುಕೊಂಡು ರಚನೆಯಾಗಿರುವ ಕಲಾಕೃತಿಯ ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯವನ್ನು ಸಾರುತ್ತಿದೆ. ಮೂರು ಅಡಿ ಎತ್ತರ ಮತ್ತು ಏಳು ಅಡಿ ಅಗಲದ ಮರಳು ಕಲಾಕೃತಿಯನ್ನು ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ರಚಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!