ಜನ ಮನದ ನಾಡಿ ಮಿಡಿತ

Advertisement

ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ; ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪದ ವಿಚಾರಣೆಗೆ ಹೈಕೋರ್ಟ್ ಅಸ್ತು

ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ (ಜೂ.20)ದಂದು ಸ್ಪಷ್ಟಪಡಿಸಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬAಧ ದಾಖಲಾಗಿರುವ ಎಫ್‌ಐಆರ್, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್ ಶಾಸಕ ಹಾಗೂ ಪ್ರಜ್ವಲ್ ತಂದೆ ಎಚ್. ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ರೇವಣ್ಣ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ರೇವಣ್ಣ ಅವರಿಗೆ ಸೀಮಿತವಾಗಿ ಈ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಪ್ರಜ್ವಲ್ ವಿರುದ್ಧ ವಿಚಾರಣೆ ಮುಂದುವರಿಸಲು ಯಾವುದೇ ಅಡ್ಡಿಯಿಲ್ಲ ಎಂದರು. ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಧ್ವನಿಗೂಡಿಸಿದರು.

ಇದನ್ನು ಆಲಿಸಿದ ಪೀಠವು ರೇವಣ್ಣ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲಾಗಿದೆ. ಹೀಗಾಗಿ, ಪ್ರಜ್ವಲ್ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆ ಮುಂದುವರಿಸಲು ಈ ಆದೇಶ ಅಡ್ಡಿಯಾಗದು ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ. ಪ್ರಕರಣದ ಹಿನ್ನೆಲೆಯನ್ನು ಗಮನಿಸೋದಾದ್ರೆ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಗೆ ಎಚ್.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಚ್.ಡಿ ರೇವಣ್ಣ ಮತ್ತು ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆನಂತರ ಸಂತ್ರಸ್ತೆಯ ಸಿಆರ್‌ಪಿಸಿ ಸೆಕ್ಷನ್ 164 ಹೇಳಿಕೆ ಆಧರಿಸಿ ಪ್ರಜ್ವಲ್ ವಿರುದ್ಧ ಮಾತ್ರ ಅತ್ಯಾಚಾರ ಆರೋಪ ಸೇರಿಸಿ, ಸಕ್ಷಮ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡವು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದೆ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾತ್ರ ಇದೆ. ಈ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ದೊರೆತಿದ್ದು, ಅವರ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಇದೇ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಜಾಮೀನು ಕೋರಿದ್ದಾರೆ. ಇನ್ನು ಪ್ರಜ್ವಲ್ ಅರ್ಜಿ ಸಂಬAಧ ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜೂನ್ 24ಕ್ಕೆ ಮುಂದೂಡಿಕೆ ಮಾಡಿದೆ

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!