ಜನ ಮನದ ನಾಡಿ ಮಿಡಿತ

Advertisement

ಹಾಸನ: ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲ್ವೆ ಹಳಿಗೆ ಬಿದ್ದ ಬಂಡೆಗಳು

ಕಳೆದ ಕೆಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಜರಿತಗಳು ಸಂಭವಿಸಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲ್ವೆ ಹಳಿಗೆ ಜೂನ್ 21ರಂದು ಬೆಳಗಿನ ಜಾವ ರಾತ್ರಿ ಬೃಹತ್ ಗಾತ್ರದ ಬಂಡೆ ಬಿದ್ದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವ ರೈಲು ಸಂಚಾರ ಸ್ಥಗಿತಗೊಂಡಿದೆ. ಎಡಕುಮೇರು ಮತ್ತು ಶಿರಿಬಾಗಿಲು ಸ್ಟೇಷನ್ ನಡುವೆ ಹಳಿಗಳ ಮೇಲೆ ಬಂಡೆ ಬಿದ್ದಿದ್ದು, ಹಳಿಗಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು ಕಣ್ಣೂರು, ಬೆಂಗಳೂರು ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶನಿವಾರ ಬೆಳಿಗ್ಗೆ 7.30ಕ್ಕೆ ಬಿ.ಸಿ.ರೋಡು ತಲುಪುವ ಮುರುಡೇಶ್ವರ ರೈಲು ಸುಮಾರು 5 ಗಂಟೆಗಳ ಕಾಲ ತಡವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು ಎಂದು ಸ್ಥಳೀಯ ಪ್ರಯಾಣಿಕರು ತಿಳಿಸಿದ್ದಾರೆ. ಸಕಲೇಶಪುರದಲ್ಲಿ ಸ್ಥಗಿತಗೊಂಡ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಬೆಳಿಗ್ಗಿನ ಉಪಹಾರ ವ್ಯವಸ್ಥೆ ಮಾಡಲಾಗಿದೆಯೆಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿರಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಜರಿದು ರಸ್ತೆಗೆ ಹಾನಿ ಸಂಭವಿಸದ್ದರಿಂದ ಪ್ರಯಾಣಿಕರು ಹೆಚ್ಚಾಗಿ ರೈಲು ಪ್ರಯಾಣವನ್ನು ಆಶ್ರಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!