ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪರಿಶಿಷ್ಟ ಪಂ.ದ ಮಹಿಳೆಗೆ ಅನ್ಯಾಯ..!! ನ್ಯಾಯಕ್ಕಾಗಿ ಬೇಡಿಕೆ..?

ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ.

15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ ಆಡಳಿತ ವ್ಯವಸ್ಥೆಯೇ ಹೊಣೆಯಾಗುತ್ತದೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಎಚ್ಚರಿಸಿದ್ದಾರೆ.

ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಂಟ್ವಾಳ ತಾಲೂಕಿನ ಕಡೇಶಿವಾಲ್ಯ ಗ್ರಾಮದ ನೀರಕಜೆ ಎಂಬಲ್ಲಿ ವಾಸ್ತವ್ಯ ಹೊಂದಿರುವ ಚೆನ್ನಪ್ಪ ಎಂಬವರ ಪತ್ನಿ ಸರ್ವೆ ಬಂಬರ್ 98/2 ಎರಲ್ಲಿ 1.98 ಎಕ್ರೆ ಜಮೀನು ಹೊಂದಿದ್ದಾರೆ. ಇದು 1970-71 ದರ್ಖಾಸ್ತು ಮಂಜೂರಾದ ಜಾಗವಾಗಿದ್ದು, ಇದರಲ್ಲಿ 25 ವರ್ಷಗಳ ಹಿಂದೆ ಮನೆ ಕಟ್ಟಿದ್ದಾರೆ. ಇವರ ಮನೆಗೆ ಬರುವಲ್ಲಿ 0.46 ಎಕ್ರೆ ಸರಕಾರಿ ಜಮೀನು ಇದ್ದು, ಸರಕಾರಿ ಜಾಗವಾಗಿದ್ದರೂ ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಅವಕಾಶ ನೀಡದೆ ಅನಧಿಕೃತವಾಗಿ ಸ್ವಾಧೀನ ಮಾಡಲಾಗಿದೆ ಎಂಬಿತ್ಯಾದಿ ವಿಚಾರಗಳನ್ನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!