ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹಣಕ್ಕಾಗಿ ತಾಯಿಯನ್ನೇ ಕೊಂದ ಪಾಪಿ ಮಗ

ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ.

ಮೃತರ ಮಗ ಈಶ ನಾಯಕ್(26) ಕೊಲೆ ಮಾಡಿದ ಆರೋಪಿ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿದ ಈಶ ನಾಯಕ್, ತಾಯಿಗೆ ಸೌಖ್ಯವಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದನು. ಅದರಂತೆ ಶಿಲ್ಪಾ ಆನ್ಲೈನ್ ಮೂಲಕ ಹಣ ಕಳುಹಿಸಿದ್ದರು. ಜೂ.19ರಂದು ಬೆಳಗ್ಗೆ ಶಿಲ್ಪಾರಿಗೆ ಕರೆ ಮಾಡಿದ ಈಶಾ, ತಾಯಿ ಬೆಳಿಗ್ಗೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ್ದನು. ಹಾಗೆ ಶಿಲ್ಪಾ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಕೆಂಪಾಗಿದ್ದು ಕುತ್ತಿಗೆಯನ್ನು ಒತ್ತಿದ ರೀತಿ ಕಂಡುಬಂದಿದೆ. ಅವರ ಮರಣದಲ್ಲಿ ಸಂಶಯ ಇರುವುದಾಗಿ ಶಿಲ್ಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜೂ.21ರಂದು ಮಣಿಪಾಲ ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರು ನೀಡಿದ ವರದಿಯಲ್ಲಿ ಪದ್ಮಾಬಾಯಿ ಅವರನ್ನು ಯಾರೋ ದುಷ್ಕರ್ಮಿಗಳು ಜೂ.18ರಂದು ರಾತ್ರಿಯಿಂದ ಜೂ.19ರ ಬೆಳಗಿನ ನಡುವೆ ಕೊಲೆ ಮಾಡಿರುವುದಾಗಿ ದೃಢಪಟ್ಟಿದೆ. ಅದರಂತೆ ಮಣಿಪಾಲ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದರು. ನಂತರದ ತನಿಖೆಯಲ್ಲಿ ಪದ್ಮಾಬಾಯಿ ಅವರನ್ನು ಅವರ ಮಗ ಈಶ ನಾಯ್ಕ್ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಅದರಂತೆ ಪೊಲೀಸರು ಆರೋಪಿ ಈಶ ನಾಯಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!