ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ”;ಸಂಸದ ಕೋಟ

ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ.

ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ, ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇ.50ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆದುದರಿಂದ ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆಯನ್ನು ಉಡುಪಿಯ ಹೊಟೇಲ್ ಡಯಾನ ಸಭಾಂಗಣದಲ್ಲಿ ನೆರವೇರಿಸಿ ಅವರು ಮಾತನಾಡಿದ್ರು. ಭಾರತದಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ವಿಸ್ತಾರವಾಗಿ ಬೆಳೆಯುತ್ತಿದ್ದು, ಮುಂದೆ ಇಡೀ ಆಡಳಿತ ವ್ಯವಸ್ಥೆಯೇ ಸಹಕಾರಿ ಕ್ಷೇತ್ರದ ಮೂಲಕ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಸಹಕಾರಿ ಸಂಸ್ಥೆಗಳಿಗೆ ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಯಲ್ಲಿ ಪ್ರಥಮ ಪ್ರಾಶಸ್ತ್ಯ ಯೋಚನೆ ಕೇಂದ್ರ ಸರಕಾರದ ಮುಂದಿದೆ. ಅಲ್ಲದೆ ಸಹಕಾರಿ ಸಂಸ್ಥೆಗಳ ಮೂಲಕ ವೊಲ್ವೋ ಸಹಿತ ಸಾರಿಗೆ ವ್ಯವಸ್ಥೆ ಮುನ್ನಡೆಸಲು ಯೋಜಿಸಲಾಗಿದೆ ಎಂದ್ರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಸಿಎ ಜಿ.ನಂಜನಗೌಡ ವಹಿಸಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!