ಜನ ಮನದ ನಾಡಿ ಮಿಡಿತ

Advertisement

ಮಂಡ್ಯ: ರಸ್ತೆ ಬದಿಯಲ್ಲಿ ವೃದ್ಧೆ ತಾಯಿಯನ್ನು ಬಿಟ್ಟು ಹೋಗಿರುವ ಮಗ

ಮಕ್ಕಳು ಏನು ಕೇಳಿದರೂ ಇಲ್ಲ ಎಂದು ಕೊಡುವ ತಾಯಿ, ತನ್ನ ಜೀವನವನ್ನೇ ಕೊನೆವರೆಗೂ ಮುಡಿಪಾಗಿ ಇಡುತ್ತಾಳೆ. ಮಕ್ಕಳು ಎದ್ರೂ, ಬಿದ್ರೂ, ಬಟ್ಟೆ ಗಲಿಜು ಆದರೂ ಕ್ಷಣದಲ್ಲೇ ಸ್ವಚ್ಛ ಮಾಡಿ ಮಡಿಲಲ್ಲಿ ಮಲಗಿಸ್ತಾಳೆ. ಮಕ್ಕಳ ಬೆಳವಣಿಗೆ ನೋಡಿ ತಾಯಿ ಖುಷಿ ಪಟ್ಟರೇ, ವಯಸ್ಸಿಗೆ ಬಂದ ಮಕ್ಕಳು ಈಗೀಗ ತಾಯಿಯನ್ನ ಬೀದಿಯಲ್ಲಿ ಬಿಟ್ಟು ಹೋಗುತ್ತಿರುವುದು ಕಣ್ಣಲ್ಲಿ ನೀರು ತರಿಸುತ್ತವೆ. ಇಂತಹ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ.

70 ರಿಂದ 80 ವರ್ಷ ಇರುವ ವೃದ್ಧೆ ತಾಯಿಯೊಬ್ಬರನ್ನು ಆಕೆಯ ಮಗನೇ ಮಂಡ್ಯದ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾನೆ. ಕಿರಾತಕ ಮಗನ ಕೃತ್ಯಕ್ಕೆ ತಾಯಿ ಅನಾಥಳಾಗಿ ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದಳು. ಇದನ್ನೂ ಯಾರೋ ವಿಡಿಯೋ ಮಾಡಿದ್ದಾರೆ. ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ತಾಯಿನ ಬಿಟ್ಟು ಹೋದ ಪಾಪಿ ಮಗನಿಗೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ. ತಾಯಿನ ಅನಾಥಳನ್ನಾಗಿ ಪಾಪಿ ಮಗ ಪರಾರಿಯಾಗಿದ್ದಾನೆ. ವೃದ್ಧೆಯನ್ನು ನೋಡಿ ತಡೆಯಲಾಗದೇ ಸ್ಥಳೀಯರೇ ಆಹಾರ ನೀಡಿದ್ದಾರೆ. ಇದಾದ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವೃದ್ಧೆಯನ್ನ ರಕ್ಷಣೆ ಮಾಡಲಾಗಿದ್ದು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ವೃದ್ಧಗೆ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!