ಜನ ಮನದ ನಾಡಿ ಮಿಡಿತ

Advertisement

ಉಡುಪಿ: ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆ ವಿಚಾರ; ಜಿಲ್ಲಾಧಿಕಾರಿಗೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ

ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆಯನ್ನು ತುರ್ತು ನಿರ್ಮಾಣ ಮಾಡುವ ಕುರಿತು ಕಾರ್ಯಸಾಮರ್ಥ್ಯದ ಪರಿಶೀಲನೆಯನ್ನು ಸಂಬಂಧಪಟ್ಟ ಇಲಾಖೆಯಿಂದ ನಡೆಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಪ್ರಕೃತಿ ವಿಕೋಪ ಯೋಜನೆಯಡಿ ಹೊಸದಾಗಿ ಸೇತುವೆ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಅವರಿಗೆ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಒತ್ತಾಯಿಸಿದ್ದಾರೆ.

ಈಗಿರುವ ಸೇತುವೆ ಶಿಥಿಲಗೊಂಡಿದ್ದು ಹದಗೆಟ್ಟಿರುವ ಮಣ್ಣಿನ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಓಡಾಡಬೇಕು. ಮಳೆಗಾಲದಲ್ಲಿ ನದಿ ತುಂಬಿ ತುಳುಕುವ ಜತೆಯಲ್ಲಿ ಸೇತುವೆಯ ಮೇಲ್ಬಾಗದಲ್ಲೂ ನೀರು ಹರಿಯುವ ಸನ್ನಿವೇಶ ಸೃಷ್ಟಿಯಾಗುತ್ತಿದ್ದು, ಜನರು ಜೀವ ಭಯದಲ್ಲೇ ಓಡಾಡಬೇಕಾಗುತ್ತದೆ. ಹೊಸಂಗಡಿ ಮೂಲಕ ಭಾಗೀಮನೆ ತೊಂಬಟ್ಟು ಸಂಪರ್ಕದ ಕಬ್ಬಿನಾಲೆ-ಇರ್ಕಿಗದ್ದೆ-ಮೂಡುಕಂಪ-ಶೇಡಿಗದ್ದೆ- ಮಾವಿನಕೊಂಬೆ ಪ್ರದೇಶದ 250 ಮಿಕ್ಕಿ ಮನೆಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಮತ್ತು ಸೇತುವೆ ಇದಾಗಿದೆ. ಮಳೆಗಾಲ ಬಂತೆಂದರೆ ಆ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳು, ನಿತ್ಯ ಕಚೇರಿ ಕೆಲಸ ಕಾರ್ಯಗಳಿಗೆ ತೆರಳುವ ಜನತೆಗೆ ಪೇಟೆ ಪಟ್ಟಣಗಳನ್ನು ತಲುಪಬೇಕಾದರೆ ಆಮಾಸೆಬೈಲ್ ಮೂಲಕ ಸುತ್ತುವರಿದು ಸಂಚರಿಸಬೇಕಾಗಿದೆ. ವರ್ಷಂಪ್ರತಿ ಸ್ಥಳೀಯರಿಂದ ಶ್ರಮದಾನದ ಮೂಲಕ ತಾತ್ಕಾಲಿಕವಾಗಿ ರಸ್ತೆಯನ್ನು ಸರಿಪಡಿಸಿ ಕೊಂಡು ಸಂಚಾರ ವ್ಯವಸ್ಥೆ ಮಾಡಲಾಗುತ್ತಿದೆ. ವಿಪರೀತ ಮಳೆ ಸಂದರ್ಭ ಸೇತುವೆಗೆ ಸಮನಾಗಿ ಮಳೆ ನೀರು ಹರಿದು ಹೋಗುವ ಕಾರಣ ಅಲ್ಲಿನ ಜನತೆ ಸಂಪರ್ಕದ ಕಡಿತದ ಭೀತಿಯನ್ನೂ ಎದುರಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅವರು ತಕ್ಷಣವೇ ಗ್ರಾಮಸ್ಥರ ರಕ್ಷಣೆಗೆ ಬೇಕಾದ ಅಗತ್ಯ ವ್ಯವಸ್ಥೆ ಕಲ್ಪಿಸುವ ಜೊತೆಗೆ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಂಜುನಾಥ ಭಂಡಾರಿ ಅವರು ಕೋರಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!