ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಪ್ರಿಯಕರನಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗಳು!!??

ಈಗಿನ ಕಾಲದಲ್ಲಿ ಮಕ್ಕಳಿಗೆ ತಂದೆ-ತಾಯಿಗಳ ಕಾಳಜಿ, ಕಳಕಳಿಗಳೇ ಅರ್ಥವಾಗಲ್ಲ. ಪ್ರಬುದ್ಧತೆ ಬರುವ ಮುನ್ನವೇ ಪ್ರೀತಿಯ ಬಲೆಯಲ್ಲಿ ಬಿದ್ದಿಬಿಡುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರೀತಿಯಿಂದ ಸಾಕಿ ಸಲುಹಿದ ತಂದೆ-ತಾಯಿಗಳ ಪ್ರೀತಿ, ಆತಂಕ, ಕಾಳಜಿಯೇ ಮಕ್ಕಳಿಗೆ ಅರ್ಥವಾಗುತ್ತಿಲ್ಲ. ಹೈದರಾಬಾದ್ ನಲ್ಲಿ 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಭೀಕರ ಘಟನೆ ನಡೆದಿದೆ.

ತನ್ನ 19 ವರ್ಷದ ಬಾಯ್ ಫ್ರೆಂಡ್ ಹಾಗೂ ಆತನ ಕಿರಿಯ ಸೋದರನ ಜೊತೆ ಸೇರಿಕೊಂಡು ತಾಯಿಯನ್ನು ಮಗಳು ಮುಗಿಸಿದ್ದಾಳೆ. ಹೈದರಾಬಾದ್‌ನ ಜೆಡಿಮೆಟ್ಲಾ ಪ್ರದೇಶದ ಎನ್‌ಎಲ್‌ಬಿ ನಗರದಲ್ಲಿ ಈ ಅಘಾತಕಾರಿ ಘಟನೆ ನಡೆದಿದೆ. ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ 8 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ 19 ವರ್ಷದ ಯುವಕನ ಪರಿಚಯವಾಗಿದೆ. ಬಳಿಕ ಆತನೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಈ ವಿಷಯ ಯುವತಿಯ ತಾಯಿಗೆ ಗೊತ್ತಾಗಿದೆ. ತಾಯಿ, ಅಪ್ರಾಪ್ತ ಮಗಳು ಯುವಕನ ಜೊತೆ ಸಂಬಂಧ ಬೆಳೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಮನೆಯಲ್ಲಿ ತಾಯಿ- ಮಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇನ್ನು ಇದೇ ವಿಷಯಕ್ಕೆ ಜೂನ್ 23 ರಂದು ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿ ಅಂಜಲಿಯನ್ನು ಮುಗಿಸಿದ್ದಾಳೆ. ಈ ವೇಳೆ ಬಾಯ್ ಫ್ರೆಂಡ್ ಹಾಗೂ ಆತನ ಸೋದರ ಕೂಡ ಮನೆಯಲ್ಲಿದ್ದು ಮಹಿಳೆಯ ಕುತ್ತಿಗೆ ಹಿಸುಕಿದ್ದಾರೆ. ಬಳಿಕ ಐರನ್ ರಾಡ್ ನಿಂದ ಹೊಡೆದಿದ್ದಾರೆ. ಜೊತೆಗೆ ಚಾಕುವಿನಿಂದ ಅಂಜಲಿಗೆ ಇರಿದಿದ್ದಾರೆ. ಹೈದರಾಬಾದ್‌ನ ಜೆಡಿಮೆಟ್ಲಾ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳಿಗೆ ಬುದ್ಧಿವಾದ ಹೇಳಿದ್ದಕ್ಕೆ ತಾಯಿಯೇ ತನ್ನ ಜೀವ ಕಳೆದುಕೊಂಡಿದ್ದಾಳೆ. ಇದಕ್ಕಿಂತ ದಾರುಣ ಕೃತ್ಯ ಮತ್ತೊಂದಿಲ್ಲ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!