ಜನ ಮನದ ನಾಡಿ ಮಿಡಿತ

Advertisement

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ; ಪ್ರವಾಸಿ ತಾಣಗಳಿಗೆ ನಿರ್ಬಂಧ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಒಳ ಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧವನ್ನು ಹಾಕಲಾಗಿದೆ. ಕೆಆರ್‌ಎಸ್ ಡ್ಯಾಂ ಈಗಾಗಲೇ ಭರ್ತಿಯಂಚಿಗೆ ತಲುಪಿದ್ದು 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕಾವೇರಿ ನದಿಯಿಂದ 29 ಸಾವಿರ ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗಿದೆ. ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿ ಬರುತ್ತಿದ್ದು ಇದರಿಂದ ಜಲಾಶಯವು 121 ಅಡಿ ಭರ್ತಿಯಾಗಿದೆ.

ಇನ್ನು ಗಂಟೆ ಗಂಟೆಗೂ ಒಳ ಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್‌ಎಸ್‌ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇನ್ನು ದಿನದಿಂದ ದಿನಕ್ಕೆ ನೀರಿನ ಮಟ್ಟ 50 ಕ್ಯೂಸೆಕ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಇರುವುದರಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ನದಿ ಪಾತ್ರದಲ್ಲಿ ಬರುವ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ನಿಮಿಷಾಂಭ, ಶ್ರೀರಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿಯವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!