ಜನ ಮನದ ನಾಡಿ ಮಿಡಿತ

Advertisement

ಚಂಡೀಗಢ: ಹೆಂಡತಿ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಪತಿ

ಹೆಂಡತಿ ಹಾಗೂ ಆಕೆಯ ಪ್ರಿಯಕರ ಕಾನ್‌ಸ್ಟೆಬಲ್‌ನ ಕಿರುಕುಳ ತಾಳಲಾರದೇ ಗಂಡ ನೇಣು ಬಿಗಿದುಕೊಂಡು ಜೀವ ಬಿಟ್ಟಿರುವ ಘಟನೆ ಹರಿಯಾಣದ ರೋಹ್ಟಕ್‌ನ ದೊಭಾ ಗ್ರಾಮದಲ್ಲಿ ನಡೆದಿದೆ.

ಜೀವ ಕಳೆದುಕೊಳ್ಳುವ ಮೊದಲು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಮಗನ್ ಎಂಬಾತ ಪ್ರಾಣ ಕಳೆದುಕೊಂಡಿರುವ ವ್ಯಕ್ತಿ. ಮಗನ್ ಮತ್ತು ದಿವ್ಯಾ ದಂಪತಿಗೆ ಒಂದು ಗಂಡು ಮಗುವಿದೆ. ಹೆಂಡತಿ ದಿವ್ಯಾ ಹಾಗೂ ಈಕೆಯ ಪ್ರಿಯಕರ ಮಹಾರಾಷ್ಟ್ರ ಮೂಲದ ಕಾನ್‌ಸ್ಟೆಬಲ್ ದೀಪಕ್ ಆರೋಪಿಗಳು ಆಗಿದ್ದಾರೆ. ಮಗನ್ ಪ್ರಾಣ ಕಳೆದುಕೊಳ್ಳುವಾಗ ಮಾಡಿದ್ದ ವಿಡಿಯೋ ವೈರಲ್ ಆದ್ಮೇಲೆ ಅವರ ಕುಟುಂಬಸ್ಥರು ಹುಡುಕಲು ಹೋದಾಗ ಅದಗಾಲೇ ಅವನ ಉಸಿರು ನಿಂತು ಹೋಗಿತ್ತು.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತಂದೆಯ ಜೀವ ತಗೆದು ಅವರ ಆಸ್ತಿಗಳನ್ನು ಮಾರಾಟ ಮಾಡಿ, 5 ಲಕ್ಷ ರೂಪಾಯಿ ಕೊಡು ಎಂದು ಹೆಂಡತಿ ದಿವ್ಯಾ ಕಿರುಕುಳ ನೀಡಿದ್ದಳು. ಈ ದುಡ್ಡನ್ನು ತನ್ನ ಪ್ರಿಯಕರ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದರಿಂದ ಲಂಚ ಕೊಟ್ಟು ಹುದ್ದೆಯಲ್ಲಿ ಬಡ್ತಿ ಪಡೆಯಲು ಯೋಜನೆ ರೂಪಿಸಿದ್ದರು. ಇಷ್ಟೇ ಅಲ್ಲದೇ, ಇಬ್ಬರು ಮುಂಬೈನಲ್ಲಿ ನೆಲೆಸಲು ಈಗಾಗಲೇ ಯೋಜನೆ ರೂಪಿಸಿದ್ದರು ಎಂದು ವಿಡಿಯೋದಲ್ಲಿ ಮಗನ್ ಆರೋಪಿಸಿದ್ದಾನೆ. ಗೋದಿ ಮಾರಾಟ ಮಾಡಿದರಿಂದ ಬಂದ ಹಣದಲ್ಲಿ ಹೆಂಡತಿಗೆ 5 ಲಕ್ಷ ರೂಪಾಯಿಗಳನ್ನು ಕೊಟ್ಟಿದ್ದೇನೆ. ಜೊತೆಗೆ ನನ್ನ ಬ್ರೇಸ್‌ಲೇಟ್ ಮಾರಾಟ ಮಾಡಿ 2 ಲಕ್ಷ ರೂಪಾಯಿ ನೀಡಿದ್ದೇನೆ. ಇಷ್ಟೇಲ್ಲಾ ಕೊಟ್ಟರೂ ಇನ್ನು ಒಂದೂವರೆ ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದರು. ನಾನು ಹಣ ಕೊಟ್ಟಿರುವ ಬಗ್ಗೆ ಮನೆಯಲ್ಲಿ ದಾಖಲೆಗಳು ಇವೆ. ಯಾವುದೇ ಕಾರಣಕ್ಕೂ ನಾನು ನನ್ನ ತಂದೆಯ ಜೀವ ತೆಗೆಯಲು ಸಾಧ್ಯವಿಲ್ಲ. ಅದಕ್ಕಾಗಿ ನನ್ನ ಪ್ರಾಣವನ್ನೇ ತೆಗೆದುಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!