ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಏಕಾಏಕಿ ನದಿ ನೀರಿನ ಮಟ್ಟ ಏರಿಕೆ; ನದಿಯಲ್ಲಿ ಸಿಲುಕಿದ್ದ 9 ಜನರ ರಕ್ಷಣೆ

ಭಾರೀ ಮಳೆಯಿಂದ ಹರಿಯುವ ನದಿಯಲ್ಲಿ ಸಿಲುಕಿಕೊಂಡಿದ್ದ 9 ಜನರನ್ನು ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಭಾರೀ ಮಳೆಯಿಂದ ತವಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆ ಆಗಿದೆ. ಈ ವೇಳೆ ನದಿಗೆ ಇಳಿದಿದ್ದ 9 ಜನರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದರಿಂದ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಸೇತುವೆ ಮೇಲಿನಿಂದ ಹಗ್ಗ ಬಿಟ್ಟಿದ್ದಾರೆ. ಈ ಹಗ್ಗಗಳನ್ನು ಹಿಡಿದುಕೊಂಡು ಒಬ್ಬೊಬ್ಬರೇ ಮೇಲಕ್ಕೆ ಬಂದಿದ್ದಾರೆ.

ಮದನ್ ಲಾಲ್ ಎನ್ನುವವರು ತವಿ ನದಿಯಲ್ಲಿ ಮರಳು ತೆಗೆಯಲು ಹೋಗಿದ್ದರು. ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಬಳಿಕ ಮದನ್ ಲಾಲ್ ಅವರನ್ನು ಎಸ್‌ಡಿಆರ್‌ಎಫ್ ಟೀಮ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಇನ್ನು ಪಿಂಡದಾನಕ್ಕೆ0ದು ನದಿಗೆ ಹೋಗಿದ್ದ ವ್ಯಕ್ತಿ ಒಬ್ಬರನ್ನು ಸೇರಿದಂತೆ ಇನ್ನು 7 ಜನರನ್ನು ರಕ್ಷಣೆ ಮಾಡಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಕುದುರೆಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!