ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಏಕಾಏಕಿ ನದಿ ನೀರಿನ ಮಟ್ಟ ಏರಿಕೆ; ನದಿಯಲ್ಲಿ ಸಿಲುಕಿದ್ದ 9 ಜನರ ರಕ್ಷಣೆ

ಭಾರೀ ಮಳೆಯಿಂದ ಹರಿಯುವ ನದಿಯಲ್ಲಿ ಸಿಲುಕಿಕೊಂಡಿದ್ದ 9 ಜನರನ್ನು ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಭಾರೀ ಮಳೆಯಿಂದ ತವಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆ ಆಗಿದೆ. ಈ ವೇಳೆ ನದಿಗೆ ಇಳಿದಿದ್ದ 9 ಜನರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದರಿಂದ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಸೇತುವೆ ಮೇಲಿನಿಂದ ಹಗ್ಗ ಬಿಟ್ಟಿದ್ದಾರೆ. ಈ ಹಗ್ಗಗಳನ್ನು ಹಿಡಿದುಕೊಂಡು ಒಬ್ಬೊಬ್ಬರೇ ಮೇಲಕ್ಕೆ ಬಂದಿದ್ದಾರೆ.

ಮದನ್ ಲಾಲ್ ಎನ್ನುವವರು ತವಿ ನದಿಯಲ್ಲಿ ಮರಳು ತೆಗೆಯಲು ಹೋಗಿದ್ದರು. ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಬಳಿಕ ಮದನ್ ಲಾಲ್ ಅವರನ್ನು ಎಸ್‌ಡಿಆರ್‌ಎಫ್ ಟೀಮ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಇನ್ನು ಪಿಂಡದಾನಕ್ಕೆ0ದು ನದಿಗೆ ಹೋಗಿದ್ದ ವ್ಯಕ್ತಿ ಒಬ್ಬರನ್ನು ಸೇರಿದಂತೆ ಇನ್ನು 7 ಜನರನ್ನು ರಕ್ಷಣೆ ಮಾಡಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಕುದುರೆಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!