ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಏಕಾಏಕಿ ನದಿ ನೀರಿನ ಮಟ್ಟ ಏರಿಕೆ; ನದಿಯಲ್ಲಿ ಸಿಲುಕಿದ್ದ 9 ಜನರ ರಕ್ಷಣೆ

ಭಾರೀ ಮಳೆಯಿಂದ ಹರಿಯುವ ನದಿಯಲ್ಲಿ ಸಿಲುಕಿಕೊಂಡಿದ್ದ 9 ಜನರನ್ನು ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಭಾರೀ ಮಳೆಯಿಂದ ತವಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆ ಆಗಿದೆ. ಈ ವೇಳೆ ನದಿಗೆ ಇಳಿದಿದ್ದ 9 ಜನರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದರಿಂದ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಸೇತುವೆ ಮೇಲಿನಿಂದ ಹಗ್ಗ ಬಿಟ್ಟಿದ್ದಾರೆ. ಈ ಹಗ್ಗಗಳನ್ನು ಹಿಡಿದುಕೊಂಡು ಒಬ್ಬೊಬ್ಬರೇ ಮೇಲಕ್ಕೆ ಬಂದಿದ್ದಾರೆ.

ಮದನ್ ಲಾಲ್ ಎನ್ನುವವರು ತವಿ ನದಿಯಲ್ಲಿ ಮರಳು ತೆಗೆಯಲು ಹೋಗಿದ್ದರು. ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಬಳಿಕ ಮದನ್ ಲಾಲ್ ಅವರನ್ನು ಎಸ್‌ಡಿಆರ್‌ಎಫ್ ಟೀಮ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಇನ್ನು ಪಿಂಡದಾನಕ್ಕೆ0ದು ನದಿಗೆ ಹೋಗಿದ್ದ ವ್ಯಕ್ತಿ ಒಬ್ಬರನ್ನು ಸೇರಿದಂತೆ ಇನ್ನು 7 ಜನರನ್ನು ರಕ್ಷಣೆ ಮಾಡಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಕುದುರೆಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!