ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಾಡಿಗೆ ವಿಚಾರದಲ್ಲಿ ಆಟೊ ಚಾಲಕನಿಗೆ ಗಂಭೀರ ಹಲ್ಲೆ

ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರದಲ್ಲಿ ಹಲವು ಸಮಯಗಳಿಂದ ಆಟೋ ಯೂನಿಯನ್ ಗಳ ಮಧ್ಯೆಯೇ ಗಲಾಟೆಗಳು ನಡೆಯುತ್ತಿರುತ್ತವೆ.

ಅದರ ಮುಂದುವರೆದ ಭಾಗವಾಗಿ ಕೆಲವು ಚಾಲಕರು ಸೇರಿ ಓರ್ವ ಚಾಲಕನಿಗೆ ಗಂಭೀರ ಹಲ್ಲೆ ನಡೆಸಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಬಿಗ್ ಬಝಾರ್ ಸಮೀಪದ ಪಾರ್ಕಿಂಗ್ ನಲ್ಲಿ ಹಲ್ಲೆ ನಡೆದಿದ್ದು, ಪ್ರಸಾದ್ ಎಂಬ ಆಟೋ ಚಾಲಕ ಗಾಯಗೊಂಡಿದ್ದರೆ. ರಾಘು ಮತ್ತು ಸಹಚರರು ಹಲ್ಲೆ ನಡೆಸಿದ್ದಾಗಿ ಸಹೋದ್ಯೋಗಿಗಳು ಆರೋಪಿಸಿದ್ದಾರೆ. ಇದೀಗ ಗಾಯಗೊಂಡ ಆಟೋ ಚಾಲಕ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಹತ್ತಾರು ಚಾಲಕರು ಆಸ್ಪತ್ರೆ ಬಳಿ ನೆರೆದು ನ್ಯಾಯಕ್ಕಾಗಿ ಆಗ್ರಹ ಮಾಡಿದ್ದಾರೆ.

ಘಟನೆ ಸಂಬ0ಧ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ನಗರದೊಳಗೇ ನಮಗೆ ಬಾಡಿಗೆ ಮಾಡಲು ಬಿಡುತ್ತಿಲ್ಲ. ನಗರದೊಳಗೆ ಐದು ಯೂನಿಯನ್ ಗಳಿವೆ. ಅವರವರ ಸಂಘ ಅವರವರಿಗೆ. ಈ ಹಿಂದೆ ಕೂಡ ಹಲ್ಲೆ ನಡೆದಿದೆ. ನಾವೆಲ್ಲಿಗೆ ಹೋಗಬೇಕು? ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಿ ಬೇಕಿದ್ದರೂ ಬಾಡಿಗೆ ಮಾಡಬಹುದು ಎಂದು ಪೊಲೀಸ್ ಇಲಾಖೆ ,ನಗರಸಭೆ ಈಗಾಗಲೇ ಅನುಮತಿ ಕೊಟ್ಟಿದೆ. ಆದರೂ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಈ ವಿಷಯವನ್ನು ಶಾಸಕರು ಮತ್ತಿತರರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಮಗೆ ನ್ಯಾಯ ಬೇಕು ಎಂದು ಆಟೋ ಚಾಲಕರು ಒತ್ತಾಯ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!